ಉಡುಪಿ: ಹಿಂದೂ ಜಾಗರಣ ವೇದಿಕೆಯ ವತಿಯಿಂದ ರವಿವಾರ ನಡೆದ ದುರ್ಗಾ ದೌಡ್ ಮೆರವಣಿಗೆಯಲ್ಲಿ ಕಾರ್ಯಕರ್ತರು ತಲವಾರು ಪ್ರದರ್ಶಿಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಈ ಬಗ್ಗೆ ಕೂಡಲೇ ಕಾನೂನು ಕ್ರಮ ತೆಗೆದುಕೊಳ್ಳುವಂತೆ ವಿವಿಧ ಸಂಘಟನೆಗಳು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿವೆ. ಕಡಿಯಾಳಿಯಿಂದ ಆರಂಭಗೊಂಡ ಮೆರವಣಿಗೆಯು ಕಲ್ಸಂಕ, ಸಿಟಿ ಬಸ್ ನಿಲ್ದಾಣ, ಸರ್ವಿಸ್ ಬಸ್ ನಿಲ್ದಾಣ, ಕೆ.ಎಂ. ಮಾರ್ಗ, ಹಳೆಯ ಡಯಾನ ಸರ್ಕಲ್, ತೆಂಕಪೇಟೆ ಮಾರ್ಗವಾಗಿ ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಸ್ಥಳದಲ್ಲಿ ಸಮಾಪ್ತಿಗೊಂಡಿತ್ತು.
ಮೆರವಣಿಗೆಯ ಮುಂಭಾಗದಲ್ಲಿದ್ದ ಕೆಲವು ಕಾರ್ಯಕರ್ತರು ತಮ್ಮ ಕೈಯಲ್ಲಿ ತಲವಾರು ಹಿಡಿದುಕೊಂಡಿದ್ದರು. ದುರ್ಗಾ ದೌಡ್ ಮೆರವಣಿಗೆಯಲ್ಲಿ ಶಸ್ತ್ರಾಸ್ತ್ರ ಪ್ರದರ್ಶನ ಮಾಡಿರುವುದು ಖಂಡನೀಯ. ಇದು ಸಂವಿಧಾನ ವಿರೋಧಿಯಾಗಿದ್ದು, ಪೊಲೀಸ್ ಇಲಾಖೆ ಕೂಡಲೇ ಸಂಘಟಕರು ಹಾಗೂ ತಲವಾರು ಪ್ರದರ್ಶನ ಮಾಡಿರುವವರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಜರಗಿಸಬೇಕು ಎಂದು ದಸಂಸ ಬೇಡ್ಕರ್ ವಾದ, ಅಸೋಸಿಯೇಶನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಉಡುಪಿ ಜಿಲ್ಲಾ ಘಟಕ ,ಎಸ್ ಡಿಪಿ ಐ ಸಹಿತ ಹಲವು ಸಂಘಟನೆಗಳು ಒತ್ತಾಯಿಸಿವೆ.
ಮೆರವಣಿಗೆಯಲ್ಲಿ ಸಚಿವ ಸುನಿಲ್ ಕುಮಾರ್, ಶಾಸಕರಾದ ರಘುಪತಿ ಭಟ್ ಸಹಿತ ಬಿಜೆಪಿಯ ಬಹುತೇಕ ಮುಖಂಡರಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…