ಉಡುಪಿ : ನಗರದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದಲ್ಲಿ ತಲವಾರು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಇಂದು ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚಿಂದ್ರ ಅವರಿಗೆ ದೂರು ಸಲ್ಲಿಸಿದರು.
ದುರ್ಗಾ ದೌಡ್ ನಲ್ಲಿ ಅಕ್ರಮವಾಗಿ ತಲವಾರು ಪ್ರದರ್ಶನ ಮಾಡುವುದರೊಂದಿಗೆ ಶ್ರೀಕಾಂತ್ ಶೆಟ್ಟಿ ಮತ್ತು ಕಾಜಲ್ ಹಿಂದುಸ್ತಾನಿ ಪ್ರಚೋದನಕಾರಿಯಾಗಿ ಮಾತನಾಡಿ ಉಡುಪಿಯ ಶಾಂತಿಯುತ ವಾತಾವರಣ ಕೆಡಿಸಲು ಯತ್ನಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಈ ಘಟನೆಯು ಪೂರ್ವ ಯೋಜಿತವಾಗಿದ್ದು ಮತ್ತು ಸಮಾಜದ ನಿರ್ದಿಷ್ಟ ವರ್ಗದ ಜನರ ವಿರುದ್ದ ಅಪರಾಧ ಎಸಗಲು ಪ್ರೇರೇಪಿಸುವಂತಿತ್ತು ಎಂದು ಸಂಘಟನೆಗಳು ಆರೋಪಿಸಿವೆ.
ಮಲ್ಪೆ: ಬಲೆಗೆ ಬಿದ್ದ ಬೃಹತ್ ಗಾತ್ರದ ಕಾರ್ಗಿಲ್ ಮೀನು – Vishwanews24
ಈ ಸಂದರ್ಭದಲ್ಲಿ ದಲಿತ ದಮನಿತ ಹೋರಾಟ ಸಮಿತಿಯ ಶ್ಯಾಮರಾಜ್ ಬಿರ್ತಿ, ದಲಿತ ಸಂಘರ್ಷ ಸಮಿತಿಯ ಸುಂದರ್ ಮಾಸ್ತರ್,ಎಪಿಸಿಆರ್ ಜಿಲ್ಲಾ ಸಂಚಾಲಕ ಹುಸೇನ್ ಕೋಡಿಬೆಂಗ್ರೆ, ಸುನ್ನಿ ಸಂಯುಕ್ತ ಜಮಾಅತಿನ ಜಿಲ್ಲಾಧ್ಯಕ್ಷ ಅಬುಬಕ್ಕರ್ ನೇಜಾರ್, ಸಹಬಾಳ್ವೆ ಅಧ್ಯಕ್ಷ ಅಮೃತ್ ಶೆಣೈ, ಕ್ರೈಸ ಮುಖಂಡ ಚಾರ್ಲ್ಸ್ ಅಂಬ್ಲರ್, ವಿಲಿಯಂ ಮಾರ್ಟಿಸ್, ಸಿ.ಪಿ.ಎಮ್ ಮುಖಂಡ ಬಾಲಕೃಷ್ಣ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಫಣಿರಾಜ್,ಸಾಲಿಡಾರಿಟಿಯ ಅಫ್ವಾನ್ ಹೂಡೆ, ಮಂಜುನಾಥ್ ಬಾಳ್ಕುದ್ರು,ಮುಸ್ಲಿಮ್ ಒಕ್ಕೂಟದ ಉಪಾಧ್ಯಕ್ಷ ಇದ್ರಿಸ್ ಹೂಡೆ, ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಉಪಸ್ಥಿತರಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…