Featured

ಉಡುಪಿ : ದೇವರನ್ನೇ ಬಿಡ್ಲಿಲ್ಲ, ಇನ್ನು ಮನುಷ್ಯರು ಯಾವ ಲೆಕ್ಕ? ಉಡುಪಿ ಜಿಲ್ಲೆಯ ಜನತೆ ಎಚ್ಚೆತ್ತುಕೊಳ್ಳಬೇಕು : ಸುನಿಲ್ ಕುಮಾರ್ ವಿರುದ್ಧ ಹೆಬ್ಬಾಳಕರ್ ವಾಗ್ದಾಳಿ – vishwanews24

ದೇವರ ಹೆಸರಿನಲ್ಲಿ ರಾಜಕೀಯ ; ಶಾಸಕ ಸುನಿಲ್ ಕುಮಾರ್  2 ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ  : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ದೇವರ ಹೆಸರಿನಲ್ಲಿ ರಾಜಕೀಯ ಮಾಡಿಕೊಂಡು ಬರುತ್ತಿರುವ ಕಾರ್ಕಳದ ಶಾಸಕ ಸುನಿಲ್ ಕುಮಾರ್, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ‌ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬ ಭಾವನೆಯಲ್ಲಿದ್ದಾರೆ.‌ ದೇವರ- ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದವರು, ಈಗ ಭಗವಂತನಿಗೆ ಮೋಸ ಮಾಡಿದ್ದಾರೆ. ಮೂರ್ತಿ ಕಂಚಿನದ್ದೋ ಅಥವಾ ಫೈಬರಿನದ್ದೊ‌ ಎಂಬುದು ಜಗಜ್ಜಾಹಿರಾಗಿದೆ. ಬಿಜೆಪಿಗೆ ಒಂದು ಸುಳ್ಳನ್ನು ಸಾವಿರ ಬಾರಿ ಹೇಳಿ ಸತ್ಯ ಮಾಡುವುದು ಕರಗತವಾಗಿದೆ ಎಂದು ಆರೋಪಿಸಿದರು.

ಈಗಲಾದರೂ ಉಡುಪಿ ಜಿಲ್ಲೆಯ ಜನತೆ ಎಚ್ಚೆತ್ತುಕೊಳ್ಳಬೇಕು. ಇವರು ದೇವರನ್ನೇ ಬಿಡ್ಲಿಲ್ಲ. ಇನ್ನು ಮನುಷ್ಯರು ಯಾವ ಲೆಕ್ಕ?. ಬಿಜೆಪಿ ಆಡಳಿತದ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ ಗೋಮಾಳದಲ್ಲಿ ಪರಶುರಾಮನ ಮೂರ್ತಿ ಸ್ಥಾಪನೆ ಮಾಡಬಾರದು ಎಂದು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆ ಮೂರ್ತಿ ಕಾಮಗಾರಿ ಮುಂದುವರಿಸಬೇಕು ಎಂಬುದು ನಮ್ಮ ಆಶಯ. ಮೂರ್ತಿಯನ್ನು ಪೂರ್ಣಗೊಳಿಸುವುದು ನಮ್ಮ ಉದ್ದೇಶ ಎಂದು ಸಿಎಂ ಹೇಳಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಟೋಲ್ ಗೇಟ್ ಸಮಸ್ಯೆಗೆ ಶೀಘ್ರ ಪರಿಹಾರ :ಕಂಚಿನಡ್ಕ ಬಳಿ ಟೋಲ್ ಗೇಟ್ ಗೆ ವಿರೋಧವಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದ್ದು, ನಾಲ್ಕು ಕಿಲೋಮೀಟರ್ ನಲ್ಲಿ ಎರಡು ಟೋಲ್ ಗೇಟ್ ಬಂದಿರುವುದು ಬಹಳ ಚರ್ಚೆಯಾಗುತ್ತಿದೆ. ಜಿಲ್ಲಾಧಿಕಾರಿ, ಎಸ್ ಪಿ, ಇತರ ಅಧಿಕಾರಿಗಳ ಜೊತೆ ನಾನು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸುವೆ. ಅಲ್ಲಿರುವ ಸಮಸ್ಯೆ ಏನು ಎಂದು ನೋಡುತ್ತೇನೆ. ಎರಡು ಕಡೆ ಸುಂಕ ಕೊಡುವುದು ಜನರಿಗೆ ಸಮಸ್ಯೆಯಾಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಸಚಿವರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳಿದರು.

 

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

4 hours ago