Featured

ಉಡುಪಿ : ದೇವರನ್ನೇ ಬಿಡ್ಲಿಲ್ಲ, ಇನ್ನು ಮನುಷ್ಯರು ಯಾವ ಲೆಕ್ಕ? ಉಡುಪಿ ಜಿಲ್ಲೆಯ ಜನತೆ ಎಚ್ಚೆತ್ತುಕೊಳ್ಳಬೇಕು : ಸುನಿಲ್ ಕುಮಾರ್ ವಿರುದ್ಧ ಹೆಬ್ಬಾಳಕರ್ ವಾಗ್ದಾಳಿ – vishwanews24

ದೇವರ ಹೆಸರಿನಲ್ಲಿ ರಾಜಕೀಯ ; ಶಾಸಕ ಸುನಿಲ್ ಕುಮಾರ್  2 ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ  : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ದೇವರ ಹೆಸರಿನಲ್ಲಿ ರಾಜಕೀಯ ಮಾಡಿಕೊಂಡು ಬರುತ್ತಿರುವ ಕಾರ್ಕಳದ ಶಾಸಕ ಸುನಿಲ್ ಕುಮಾರ್, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ‌ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬ ಭಾವನೆಯಲ್ಲಿದ್ದಾರೆ.‌ ದೇವರ- ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದವರು, ಈಗ ಭಗವಂತನಿಗೆ ಮೋಸ ಮಾಡಿದ್ದಾರೆ. ಮೂರ್ತಿ ಕಂಚಿನದ್ದೋ ಅಥವಾ ಫೈಬರಿನದ್ದೊ‌ ಎಂಬುದು ಜಗಜ್ಜಾಹಿರಾಗಿದೆ. ಬಿಜೆಪಿಗೆ ಒಂದು ಸುಳ್ಳನ್ನು ಸಾವಿರ ಬಾರಿ ಹೇಳಿ ಸತ್ಯ ಮಾಡುವುದು ಕರಗತವಾಗಿದೆ ಎಂದು ಆರೋಪಿಸಿದರು.

ಈಗಲಾದರೂ ಉಡುಪಿ ಜಿಲ್ಲೆಯ ಜನತೆ ಎಚ್ಚೆತ್ತುಕೊಳ್ಳಬೇಕು. ಇವರು ದೇವರನ್ನೇ ಬಿಡ್ಲಿಲ್ಲ. ಇನ್ನು ಮನುಷ್ಯರು ಯಾವ ಲೆಕ್ಕ?. ಬಿಜೆಪಿ ಆಡಳಿತದ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ ಗೋಮಾಳದಲ್ಲಿ ಪರಶುರಾಮನ ಮೂರ್ತಿ ಸ್ಥಾಪನೆ ಮಾಡಬಾರದು ಎಂದು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆ ಮೂರ್ತಿ ಕಾಮಗಾರಿ ಮುಂದುವರಿಸಬೇಕು ಎಂಬುದು ನಮ್ಮ ಆಶಯ. ಮೂರ್ತಿಯನ್ನು ಪೂರ್ಣಗೊಳಿಸುವುದು ನಮ್ಮ ಉದ್ದೇಶ ಎಂದು ಸಿಎಂ ಹೇಳಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಟೋಲ್ ಗೇಟ್ ಸಮಸ್ಯೆಗೆ ಶೀಘ್ರ ಪರಿಹಾರ :ಕಂಚಿನಡ್ಕ ಬಳಿ ಟೋಲ್ ಗೇಟ್ ಗೆ ವಿರೋಧವಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದ್ದು, ನಾಲ್ಕು ಕಿಲೋಮೀಟರ್ ನಲ್ಲಿ ಎರಡು ಟೋಲ್ ಗೇಟ್ ಬಂದಿರುವುದು ಬಹಳ ಚರ್ಚೆಯಾಗುತ್ತಿದೆ. ಜಿಲ್ಲಾಧಿಕಾರಿ, ಎಸ್ ಪಿ, ಇತರ ಅಧಿಕಾರಿಗಳ ಜೊತೆ ನಾನು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸುವೆ. ಅಲ್ಲಿರುವ ಸಮಸ್ಯೆ ಏನು ಎಂದು ನೋಡುತ್ತೇನೆ. ಎರಡು ಕಡೆ ಸುಂಕ ಕೊಡುವುದು ಜನರಿಗೆ ಸಮಸ್ಯೆಯಾಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಸಚಿವರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳಿದರು.

 

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

6 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

9 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

12 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

13 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

13 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

13 hours ago