ಉಡುಪಿ: ದೇವರ ಹೆಸರಿನಲ್ಲಿ ರಾಜಕೀಯ ಮಾಡಿಕೊಂಡು ಬರುತ್ತಿರುವ ಕಾರ್ಕಳದ ಶಾಸಕ ಸುನಿಲ್ ಕುಮಾರ್, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬ ಭಾವನೆಯಲ್ಲಿದ್ದಾರೆ. ದೇವರ- ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದವರು, ಈಗ ಭಗವಂತನಿಗೆ ಮೋಸ ಮಾಡಿದ್ದಾರೆ. ಮೂರ್ತಿ ಕಂಚಿನದ್ದೋ ಅಥವಾ ಫೈಬರಿನದ್ದೊ ಎಂಬುದು ಜಗಜ್ಜಾಹಿರಾಗಿದೆ. ಬಿಜೆಪಿಗೆ ಒಂದು ಸುಳ್ಳನ್ನು ಸಾವಿರ ಬಾರಿ ಹೇಳಿ ಸತ್ಯ ಮಾಡುವುದು ಕರಗತವಾಗಿದೆ ಎಂದು ಆರೋಪಿಸಿದರು.
ಈಗಲಾದರೂ ಉಡುಪಿ ಜಿಲ್ಲೆಯ ಜನತೆ ಎಚ್ಚೆತ್ತುಕೊಳ್ಳಬೇಕು. ಇವರು ದೇವರನ್ನೇ ಬಿಡ್ಲಿಲ್ಲ. ಇನ್ನು ಮನುಷ್ಯರು ಯಾವ ಲೆಕ್ಕ?. ಬಿಜೆಪಿ ಆಡಳಿತದ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ ಗೋಮಾಳದಲ್ಲಿ ಪರಶುರಾಮನ ಮೂರ್ತಿ ಸ್ಥಾಪನೆ ಮಾಡಬಾರದು ಎಂದು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆ ಮೂರ್ತಿ ಕಾಮಗಾರಿ ಮುಂದುವರಿಸಬೇಕು ಎಂಬುದು ನಮ್ಮ ಆಶಯ. ಮೂರ್ತಿಯನ್ನು ಪೂರ್ಣಗೊಳಿಸುವುದು ನಮ್ಮ ಉದ್ದೇಶ ಎಂದು ಸಿಎಂ ಹೇಳಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಟೋಲ್ ಗೇಟ್ ಸಮಸ್ಯೆಗೆ ಶೀಘ್ರ ಪರಿಹಾರ :ಕಂಚಿನಡ್ಕ ಬಳಿ ಟೋಲ್ ಗೇಟ್ ಗೆ ವಿರೋಧವಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದ್ದು, ನಾಲ್ಕು ಕಿಲೋಮೀಟರ್ ನಲ್ಲಿ ಎರಡು ಟೋಲ್ ಗೇಟ್ ಬಂದಿರುವುದು ಬಹಳ ಚರ್ಚೆಯಾಗುತ್ತಿದೆ. ಜಿಲ್ಲಾಧಿಕಾರಿ, ಎಸ್ ಪಿ, ಇತರ ಅಧಿಕಾರಿಗಳ ಜೊತೆ ನಾನು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸುವೆ. ಅಲ್ಲಿರುವ ಸಮಸ್ಯೆ ಏನು ಎಂದು ನೋಡುತ್ತೇನೆ. ಎರಡು ಕಡೆ ಸುಂಕ ಕೊಡುವುದು ಜನರಿಗೆ ಸಮಸ್ಯೆಯಾಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಸಚಿವರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…