Featured

ಉಡುಪಿ: ದೇಶದ್ರೋಹ ಕೆಲಸ ಮಾಡಿದ ರಾಧಾಕೃಷ್ಣರನ್ನು ತಕ್ಷಣ ಬಂಧಿಸಿ : ಹಿಂದು ಜಾಗರಣ ವೇದಿಕೆ ಒತ್ತಾಯ -Vishwanews24

ಉಡುಪಿ: ದೇಶದ್ರೋಹ ಕೆಲಸ ಮಾಡಿದ ರಾಧಾಕೃಷ್ಣರನ್ನು ತಕ್ಷಣ ಬಂಧಿಸಿ : ಹಿಂದು ಜಾಗರಣ ವೇದಿಕೆ ಒತ್ತಾಯ -Vishwanews24

ಉಡುಪಿ : ದೇಶದ್ರೋಹದ ಕೆಲಸ ಮಾಡಿದ ಕಾರ್ಕಳ ಹಿರ್ಗಾನದ ರಾಧಾಕೃಷ್ಣ ಅವರನ್ನು ತಕ್ಷಣಕ್ಕೆ ಬಂಧಿಸಬೇಕು. ಕೇವಲ ಈತನನ್ನು ಠಾಣೆಗೆ ಕರೆದು ವಿಚಾರಿಸಿದ ಕಾರಣಕ್ಕೆ ಕಾಂಗ್ರೆಸ್ಸಿಗರು ಪೊಲೀಸ್ ದೌರ್ಜನ್ಯ ಎಂದು ಕಥೆ ಕಟ್ಟೆ ಪೊಲೀಸರ ವಿರುದ್ಧವೇ ಪ್ರತಿಭಟನೆ ನಡೆಸಲು ಸಿದ್ಧರಾಗಿದ್ದಾರೆ ಎಂದು ತಿಳಿದುಬಂದಿದ್ದು, ಒಂದು ವೇಳೆ ಕಾಂಗ್ರೆಸಿಗರು ಈ ದೇಶದ್ರೋಹಿಯನ್ನು ಬೆಂಬಲಿಸಿ ಪ್ರತಿಭಟನೆ ನಡೆಸುವುದಾದರೆ, ನಾವು ಕಾರ್ಕಳ ಪೊಲೀಸರನ್ನು ಮತ್ತು ದೇಶದ ಯೋಧರನ್ನು ಬೆಂಬಲಿಸಿ ಕಾಂಗ್ರೆಸ್ಸಿಗರಿಗಿಂತ ಹತ್ತು ಪಟ್ಟು ದೊಡ್ಡ ಸಂಖ್ಯೆಯಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಲಿದ್ದೇವೆ” ಎಂದು ಹಿಂದು ಜಾಗರಣ ವೇದಿಕೆಯ ಮಂಗಳೂರು ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ ಎಚ್ಚರಿಕೆ ಕೊಟ್ಟಿದ್ದಾರೆ.

ಈ ಕುರಿತು ಉಡುಪಿ ‌ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ಮಾತನಾಡಿ, “ರಾಧಾಕೃಷ್ಣಾ ಓರ್ವ ವೃತಿಪರ ಕ್ರಿಮಿನಲ್. ದೇಶದ್ರೋಹದ ಆ ಕೆಲಸ ಮಾಡುವವರ ಪರ ಕಾಂಗ್ರೆಸ್ ಯಾವಾಗಲು ಬೆಂಬಲ ನೀಡುತ್ತಾ ಬಂದಿದೆ. ಓರ್ವ ಪ್ರಾಮಾಣಿಕ ಎಸ್ ಐ ಅವರನ್ನು ಅಮಾನತು ಮಾಡಿಸುವ ಹುನ್ನಾರ ಇದಾಗಿದ್ದು, ರಾಧಾಕೃಷ್ಣಾ ಅವರ ಮೇಲೆ ಹಲ್ಲೆ ಮಾಡಿದ್ದಾರೆಂದು ಪೊಲೀಸರ ಮೇಲೆ ಕಾಂಗ್ರೆಸಿಗರು ಸುಳ್ಳು ಆರೋಪ ಹೊರಿಸಿ ತಮ್ಮ ಕಾರ್ಯಕರ್ತನಾದನನ್ನು ಸ್ವಾತಂತ್ರ್ಯ ಹೋರಾಟಗಾರ ಎಂಬಂತೆ ಬಿಂಬಿಸಲು ಹೊರಟಿದ್ದಾರೆ” ಎಂದರು.

“ಭಾರತೀಯ ಯೋಧರ ಸಾವನ್ನು ಬಯಸಿ ಪಾಕಿಸ್ತಾನಿ ಸೈನಿಕರ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಈ ದೇಶದ್ರೋಹಿಯನ್ನು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮೊದಲಾದವರು ತನ್ನ ಕಾರ್ಯಕರ್ತ ಎಂದು ಸಮರ್ಥಿಸುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ” ಎಂದಿದ್ದಾರೆ.

“ಪೊಲೀಸರು ರಾಧಾಕೃಷ್ಣಾಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವುದು ಸತ್ಯಕ್ಕೆ ದೂರವಾದ ಸಂಗತಿ, ವಿಚಾರಣೆ ಮುಗಿದ ಬಳಿಕ ನಡೆದುಕೊಂಡು ಮನೆಗೆ ಹೋದವನನ್ನು ಕಾಂಗ್ರೆಸ್ ನಾಯಕರೇ ಕರೆತಂದು ಅಸ್ಪತ್ರೆಗೆ ಸೇರಿಸಿ ಪೊಲೀಸರ ಮೇಲೆ ಹಲ್ಲೆ ಆರೋಪ ಮಾಡುತ್ತಿದ್ದಾರೆ”.

ಇನ್ನು “ರಾಧಾಕೃಷ್ಣ ನಾಯಕ್ ಹಿರ್ಗಾನ ಈತನ ಮೇಲೆ ಇದೇ ಮೊದಲ ಬಾರಿ ಪ್ರಕರಣ ದಾಖಲಾಗುತ್ತಿರುವುದಲ್ಲ. ಈ ಹಿಂದೆಯೂ ಈತನ ಮೇಲೆ ಬೆಂಗಳೂರಿನಲ್ಲಿ ಮಹಿಳಿಯೊಬ್ಬರ ಬಗ್ಗೆ ಅಶ್ಲೀಲ ಪೋಸ್ಟ್ ಹಾಕಿ ತೇಜೋವಧೆ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. ಇಂತಹ ವಿಕೃತ ವ್ಯಕ್ತಿಯ ಸಮರ್ಥನೆಗೆ ಸಿದ್ದರಾಮಯ್ಯ ಮೊದಲಾದ ಹಿಂದೂ ವಿರೋಧಿ ದೇಶವಿರೋಧಿ ರಾಜಕಾರಣಿಗಳು ಮುಂದಾಗಿದ್ದಾರೆ” ಎಂದರು.

ವಿವಾದಿತ ಪೋಸ್ಟ್ ತನ್ನದಲ್ಲದೆ ಇದ್ದಿದ್ದರೆ ನಕಲಿ ಪೋಸ್ಟ್ ಹಾಕಿದವರ ವಿರುದ್ಧ ಕಾಂಗ್ರೆಸ್ ಪಕ್ಷ ಅಥವಾ ಅವರೇ ಒಂದೂ ಹೇಳಿಕೆಯನ್ನು ನೀಡದೇ ಇರುವುದೇಕೆ? ಅವಹೇಳನಖರಿ ಪೋಸ್ಟ್ ಗಳನ್ನೂ ತೆಗೆದಿರುವ ಕಾರಣ ಏನು? ಎಂದು ಪ್ರಶ್ನಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಹಿಂದು ಜಾಗರಣ ವೇದಿಕೆಯ ಮುಖಂಡರಾದ ರಾಜೇಶ್ ಉಚ್ಚಿಲ, ಪ್ರವೀಣ್ ಹಿರೇಮಠ, ರಿಕೇಶ್ ಪಾಲನ್ , ಮಹೇಶ್ ಬೈಲೂರು ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

15 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago