ಉಡುಪಿ : ಭಾರತ ದೇಶದ ಭದ್ರತೆ, ಆರ್ಥಿಕ ಸಬಲೀಕರಣ, ಭಯೋತ್ಪಾದನೆ ನಿವಾರಣೆಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರನ್ನು ಬಹುಮತದಿಂದ ಗೆಲ್ಲಿಸಿ, ರಾಷ್ಟ್ರ ಭಕ್ತ ಶ್ರೀ ನರೇಂದ್ರ ಮೋದಿಯವರನ್ನು ದೇಶದ ಪ್ರಧಾನಿಯನ್ನಾಗಿ ಮಾಡಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಬೈಂದೂರು ವಿಧಾನಸಭಾ ಕ್ಷೇತ್ರದ ತಿರುಗಾಲು, ಬಿಜೂರು, ಶಿರೂರು, ಎಳಜಿ ಮುಂತಾದ ಗ್ರಾಮಗಳಲ್ಲಿ ಚುನಾವಣಾ ಪ್ರಚಾರಾರ್ಥ ಸಾರ್ವಜನಿಕ ಸಭೆಗಳಲ್ಲಿ ಮಾತನಾಡಿ ಮತದಾರರಿಗೆ ಮನವಿ ಮಾಡಿದರು.
ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಬಡವರ ಮನೆಗಳಲ್ಲಿ ಗ್ಯಾಸ್ ಮೂಲಕ ಅಡುಗೆ ಮಾಡಲು ಅವಕಾಶವಾಯಿತು. 11 ಕೋಟಿ 50 ಲಕ್ಷ ಶೌಚಾಲಯ ಭಾರತದಲ್ಲಿ ನಿರ್ಮಾಣವಾಯಿತು. ದೀನದಯಾಳ್ ಯೋಜನೆಯ ಮೂಲಕ ಕಡು ಬಡವರ ಮನೆಗೆ ವಿದ್ಯುತ್ ಸಂಪರ್ಕ ನೀಡಲಾಯಿತು. ಇದೆಲ್ಲದಕ್ಕಿಂತ ದೇಶದ 146 ಕೋಟಿ ಜನರಿಗೆ ಪ್ರಧಾನಿ ಮೋದಿ ಬದುಕಿನ ಗ್ಯಾರಂಟಿ ಕಟ್ಟಿಕೊಟ್ಟರು. ವಿಶ್ವದಲ್ಲಿ ಭಾರತ ಬಲಿಷ್ಠ ರಾಷ್ಟ್ರವನ್ನಾಗಿ ಮೂಡಿಬರುತ್ತದೆ. ದೇಶದ ಮುಂದಿನ ಜನಾಂಗ ನೆಮ್ಮದಿಯಿಂದ ಬದುಕಲು ಬಿಜೆಪಿಗೆ ಮತ ನೀಡಿ ಎಂದು ಕೋಟ ವಿವಿಧಡೆಯಲ್ಲಿ ಸಾರ್ವಜನಿಕರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಗುರುರಾಜ ಗಂಟೆ ಹೊಳೆ ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷರಾದ ದೀಪಕ್ ಶೆಟ್ಟಿ ಮತ್ತು ಉಡುಪಿ ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷರಾದ ಪೃಥ್ವಿರಾಜ ಶೆಟ್ಟಿ ಬಿಲ್ಲಾಡಿ ಮತ್ತು ಮುಂತಾದ ಮುಖಂಡರು ಉಪಸ್ಥಿತರಿದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…