ಉಡುಪಿ: ದೇಶವನ್ನು 60 ವರ್ಷ ಲೂಟಿ ಮಾಡಿದವರು ಇದೀಗ ಒಂದಾಗಿದ್ದಾರೆ : ಶೋಭಾ ಕರಂದ್ಲಾಜೆ – Vishwanews24
ಉಡುಪಿ: ದೇಶವನ್ನು 60 ವರ್ಷ ಲೂಟಿ ಮಾಡಿದವರು ಇದೀಗ ಒಂದಾಗಿದ್ದಾರೆ : ಶೋಭಾ ಕರಂದ್ಲಾಜೆ
ಉಡುಪಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಶೋಭಾ ಕರಂದ್ಲಾಜೆ, ನಿನ್ನೆ ವಿರೋಧ ಪಕ್ಷಗಳು ನಡೆಸಿದ ಸಭೆ ವಿಚಾರವಾಗಿ ಮಾತನಾಡಿ ‘ದೇಶವನ್ನು 60 ವರ್ಷ ಲೂಟಿ ಮಾಡಿದವರು ಇದೀಗ ಒಂದಾಗಿದ್ದಾರೆ. ಈ ಈಸ್ಟ್ ಇಂಡಿಯಾ ಕಂಪನಿಗೆ ಪ್ರಧಾನಿ ನರೇಂದ್ರ ಮೋದಿಯೇ ಟಾರ್ಗೆಟ್ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು ‘ ಕಳೆದ ಬಾರಿಯಂತೆ ಮತ್ತೆ ಬಿರುಸಿನ ಪ್ರಚಾರ ಶುರು ಮಾಡಿದ್ದಾರೆ. ನೆನ್ನೆ ನಡೆದ ಒಕ್ಕೂಟ ಸಭೆಯ ಬಗ್ಗೆ ಮಾತನಾಡಿದ ಶೋಭಾ, ತಮ್ಮ ಒಕ್ಕೂಟಕ್ಕೆ ಇಂಡಿಯಾ ಎಂಬ ಹೆಸರು ಇಟ್ಟುಕೊಂಡಿದ್ದಾರೆ. ಇದು ಭಾರತ ವರ್ಸಸ್ ಈಸ್ಟ್ ಇಂಡಿಯಾ ಕಂಪನಿ ಎಂದಿದ್ದಾರೆ.
ಮರವಂತೆ: ಸೆಲ್ಫೀ ತೆಗೆಯಲು ಹೋಗಿ ಸಮುದ್ರ ಪಾಲಾದ ಯುವಕನ ಮೃತದೇಹ ಪತ್ತೆ – Vishwanews24
