ಕೋಟ: ರಾಜ್ಯದಲ್ಲಿ ಮತಾಂತರ ನಿಷೇಧ ಬಗ್ಗೆ ಚರ್ಚೆಗಳಾಗುತ್ತಿವೆ. ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವುದು ಅತ್ಯಗತ್ಯ. ದೇಶದ ವಿವಿಧ ರಾಜ್ಯಗಳಲ್ಲಿ ಮತಾಂತರ ವ್ಯಾಪಕವಾಗಿ ಹರಡಿದೆ. ನಾನಾ ಆಸೆ- ಆಮಿಷ ಒಡ್ಡಿ , ಹಿಂದೂ ದೇವರನ್ನು ಅಪಹಾಸ್ಯ ಮಾಡಿ, ಮತಾಂತರ ಮಾಡುವುದರ ವಿರುದ್ಧ ಮಠಮಂದಿರಗಳು ಸಿಡಿದೆದ್ದು ನಿಲ್ಲಲಿವೆ ಎಂದು ಸಿದ್ಧಗಿರಿ ಮಹಾಸಂಸ್ಥಾನ ಶ್ರೀ ಕಾಡು ಸಿದ್ಧೇಶ್ವರ ಸ್ವಾಮೀಜಿ ಹೇಳಿದರು.
ಅವರು ಬಾಳೆಕುದ್ರು ಮಠಕ್ಕೆ ಭೇಟಿ ನೀಡಿದ ಸಂದರ್ಭ ಮಾತನಾಡಿದರು. ಮತಾಂತರ ಆಗಿಯೂ ಸರಕಾರದ ಸವಲತ್ತು ಪಡೆಯುವುದು ಸರಿಯಲ್ಲ. ಒತ್ತಾಯಪೂರ್ವಕ ಮತಾಂತರ ಒಳ್ಳೆಯ ಬೆಳವಣಿಗೆಯಲ್ಲ. ಇದು ಹೀಗೆಯೇ ಮುಂದುವರೆದರೆ ಹಿಂದೂ ಸಮಾಜಕ್ಕೆ ಸಂಕಷ್ಟ ಎದುರಾಗುವುದರಲ್ಲಿ ಯಾವುದೇ ಅನುಮಾನವೂ ಇಲ್ಲ. ಈ ವಿಚಾರದಲ್ಲಿ ರಾಜಕೀಯ ಸಲ್ಲದು. ಕಾಯಿದೆ ಜಾರಿಗೊಳ್ಳುವುದಕ್ಕೆ ಎಲ್ಲರೂ ಅನುಕೂಲ ಮಾಡಿಕೊಡಬೇಕು ಎಂದರು.
ಈ ಸಂದರ್ಭ ಬಾಳೆಕುದ್ರು ಮಠದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿಯವರನ್ನು ಭೇಟಿ ಮಾಡಿ ಮಠದಲ್ಲಿ ನಡೆಯುವ ವಿವಿಧ ಧಾರ್ಮಿಕ, ಸಾಂಸ್ಕ್ರತಿಕ ಕಾರ್ಯಕ್ರಮಗಳ ಕುರಿತು ಚರ್ಚಿಸಿದರು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…