ಉಡುಪಿ: ದೇಶ ಹಾಗೂ ಸಮಾಜದ ಶಾಂತಿ ಸುವ್ಯವಸ್ಥೆಗಾಗಿ ತಮ್ಮ ಕರ್ತವ್ಯದ ಸಮಯದಲ್ಲಿ ಪೊಲೀಸರು ಮಾಡುವ ತ್ಯಾಗ ಹಾಗೂ ಬಲಿದಾನ ಸದಾ ಅವಿಸ್ಮರಣೀಯವಾದುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.
ಅವರು ಇಂದು ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ , ಚಂದು ಮೈದಾನದಲ್ಲಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಪೋಲಿಸ್ ಹುತಾತ್ಮ ಸ್ಮಾರಕಕ್ಕೆ ಗೌರವ ವಂದನೆ ಸಲ್ಲಿಸಿ ಮಾತನಾಡಿದರು.
ಯಾವುದೇ ಅಸಾಧಾರಣಾ ಸನ್ನಿವೇಶದಲ್ಲೂ ಸಹ ವಿಶೇಷ ಸೇವೆ ಸಲ್ಲಿಸುವ ಪೊಲೀಸರು, ತುರ್ತು ಪರಿಸ್ಥಿತಿ, ಕ್ಲಿಸ್ಟಕರ ಪರಿಸ್ಥಿತಿ,ಪ್ರಾಕೃತಿಕ ವಿಕೋಪ ಪರಿಸ್ಥಿತಿಯಲ್ಲೂ ಸಹ ಎದೆಗುಂದದೇ ಕಾರ್ಯ ನಿರ್ವಹಿಸುತ್ತಾರೆ, ಸಮಾಜದಲ್ಲಿ ಜನತೆ ಶಾಂತಿ ನೆಮ್ಮದಿಯಿಂದ ಬದುಕುತ್ತಿರುವುದಕ್ಕೆ ಪೊಲೀಸರು ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿರುವುದೇ ಕಾರಣ. ಉಡುಪಿ ಜಿಲ್ಲೆಯಲ್ಲಿ ಪೊಲೀಸರು ಅತ್ಯಂತ ಸುವ್ಯವಸ್ಥಿತವಾಗಿ ಯೋಜನಾ ಬದ್ದವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಗೆ ಜಿಲ್ಲಾಡಳಿತದಿಂದ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದರು.
ಎಸ್ಪಿ ವಿಷ್ಣುವರ್ಧನ್ ಪೊಲೀಸ್ ಹುತಾತ್ಮರ ದಿನಾಚರಣೆಯ ಮಹತ್ವ ಹಾಗೂ 1-9-2020 ರಿಂದ 31-8-2021 ರ ವರೆಗೆ ಕರ್ತವ್ಯದ ಅವಧಿಯಲ್ಲಿ ಹುತಾತ್ಮರಾದ ಕರ್ನಾಟಕದ 16 ಮಂದಿ ಸೇÃರಿದಂತೆ ದೇಶದ ಒಟ್ಟು 377 ಪೊಲೀಸರ ನಾಮಸ್ಮರಣೆ ಮಾಡಿದರು. ಹುತಾತ್ಮ ಪೊಲೀಸರ ಗೌರವಾರ್ಥ 3 ಸುತ್ತು ಗುಂಡು ಹಾರಿಸಲಾಯಿತು, ಎರಡು ನಿಮಿಷಗಳ ಮೌನಾಚರಣೆ ನಡೆಯಿತು.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ ಉಪಸ್ಥಿತರಿದ್ದರು. ಪ್ರೋಬೆಷನರ್ ಆರ್.ಎಸ್.ಐ ಪುನೀತ್ ಕುಮಾರ್ ಪರೇಡ್ ನೇತೃತ್ವ ವಹಿಸಿದ್ದರು. ಕರಾವಳಿ ಕಾವಲು ಪೊಲೀಸ್ ನ ಎಸ್.ಐ. ಬಿ.ಮನಮೋಹನ್ ರಾವ್ ನಿರೂಪಿಸಿದರು.
ಐಪಿಎಸ್ ತರಬೇತಿ ನೆನೆಪಿಸಿಕೊಂಡ ಜಿಲ್ಲಾಧಿಕಾರಿ ಕೂರ್ಮರಾವ್ ಎಂ, ತಾವು ಐಪಿಎಸ್ ತರಬೇತಿಯಲ್ಲಿದ್ದಾಗ ಅಕಾಡೆಮಿಯಲ್ಲಿ, ಪೊಲೀಸರು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಮೊದಲು ಸಮಾಜಕ್ಕಾಗಿ ಕರ್ತವ್ಯ ನಿರ್ವಹಿಸಬೇಕು,ಎರಡನೇಯದಾಗಿ ತಮ್ಮ ಜೊತೆಯಲ್ಲಿರುವ ಸಹೋದ್ಯೋಗಿಗಳ ರಕ್ಷಣೆಗೆ ಮತ್ತು ಅಂತಿಮವಾಗಿ ತನ್ನ ಪ್ರಾಣದ ಕುರಿತು ಯೋಚಿಸಬೇಕು ಎಂದು ತಿಳಿಸಿದ್ದರು , ಪೊಲೀಸರು ಎಂದೆ0ದಿಗೂ ಅದೇ ರೀತಿ ಕರ್ತವ್ಯ ನಿರ್ವಹಿಸುತ್ತಾರೆ ಎಂದರು.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…