Featured

ಉಡುಪಿ : ದೇಶ ಹಾಗೂ ಸಮಾಜದ ಶಾಂತಿ ಸುವ್ಯವಸ್ಥೆಗಾಗಿ ಪೊಲೀಸರು ಮಾಡುವ ತ್ಯಾಗ,ಬಲಿದಾನ ಅವಿಸ್ಮರಣೀಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. – Vishwanews24

ಉಡುಪಿ : ಪೊಲೀಸರ ತ್ಯಾಗ,ಬಲಿದಾನ ಅವಿಸ್ಮರಣೀಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. – Vishwanews24

ಉಡುಪಿ: ದೇಶ ಹಾಗೂ ಸಮಾಜದ ಶಾಂತಿ ಸುವ್ಯವಸ್ಥೆಗಾಗಿ ತಮ್ಮ ಕರ್ತವ್ಯದ ಸಮಯದಲ್ಲಿ ಪೊಲೀಸರು ಮಾಡುವ ತ್ಯಾಗ ಹಾಗೂ ಬಲಿದಾನ ಸದಾ ಅವಿಸ್ಮರಣೀಯವಾದುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.

ಅವರು ಇಂದು ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ , ಚಂದು ಮೈದಾನದಲ್ಲಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಪೋಲಿಸ್ ಹುತಾತ್ಮ ಸ್ಮಾರಕಕ್ಕೆ ಗೌರವ ವಂದನೆ ಸಲ್ಲಿಸಿ ಮಾತನಾಡಿದರು.

ಯಾವುದೇ ಅಸಾಧಾರಣಾ ಸನ್ನಿವೇಶದಲ್ಲೂ ಸಹ ವಿಶೇಷ ಸೇವೆ ಸಲ್ಲಿಸುವ ಪೊಲೀಸರು, ತುರ್ತು ಪರಿಸ್ಥಿತಿ, ಕ್ಲಿಸ್ಟಕರ ಪರಿಸ್ಥಿತಿ,ಪ್ರಾಕೃತಿಕ ವಿಕೋಪ ಪರಿಸ್ಥಿತಿಯಲ್ಲೂ ಸಹ ಎದೆಗುಂದದೇ ಕಾರ್ಯ ನಿರ್ವಹಿಸುತ್ತಾರೆ, ಸಮಾಜದಲ್ಲಿ ಜನತೆ ಶಾಂತಿ ನೆಮ್ಮದಿಯಿಂದ ಬದುಕುತ್ತಿರುವುದಕ್ಕೆ ಪೊಲೀಸರು ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿರುವುದೇ ಕಾರಣ. ಉಡುಪಿ ಜಿಲ್ಲೆಯಲ್ಲಿ ಪೊಲೀಸರು ಅತ್ಯಂತ ಸುವ್ಯವಸ್ಥಿತವಾಗಿ ಯೋಜನಾ ಬದ್ದವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಗೆ ಜಿಲ್ಲಾಡಳಿತದಿಂದ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದರು.

ಎಸ್ಪಿ ವಿಷ್ಣುವರ್ಧನ್ ಪೊಲೀಸ್ ಹುತಾತ್ಮರ ದಿನಾಚರಣೆಯ ಮಹತ್ವ ಹಾಗೂ 1-9-2020 ರಿಂದ 31-8-2021 ರ ವರೆಗೆ ಕರ್ತವ್ಯದ ಅವಧಿಯಲ್ಲಿ ಹುತಾತ್ಮರಾದ ಕರ್ನಾಟಕದ 16 ಮಂದಿ ಸೇÃರಿದಂತೆ ದೇಶದ ಒಟ್ಟು 377 ಪೊಲೀಸರ ನಾಮಸ್ಮರಣೆ ಮಾಡಿದರು. ಹುತಾತ್ಮ ಪೊಲೀಸರ ಗೌರವಾರ್ಥ 3 ಸುತ್ತು ಗುಂಡು ಹಾರಿಸಲಾಯಿತು, ಎರಡು ನಿಮಿಷಗಳ ಮೌನಾಚರಣೆ ನಡೆಯಿತು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ ಉಪಸ್ಥಿತರಿದ್ದರು. ಪ್ರೋಬೆಷನರ್ ಆರ್.ಎಸ್.ಐ ಪುನೀತ್ ಕುಮಾರ್ ಪರೇಡ್ ನೇತೃತ್ವ ವಹಿಸಿದ್ದರು. ಕರಾವಳಿ ಕಾವಲು ಪೊಲೀಸ್ ನ ಎಸ್.ಐ. ಬಿ.ಮನಮೋಹನ್ ರಾವ್ ನಿರೂಪಿಸಿದರು.

ಐಪಿಎಸ್ ತರಬೇತಿ ನೆನೆಪಿಸಿಕೊಂಡ ಜಿಲ್ಲಾಧಿಕಾರಿ ಕೂರ್ಮರಾವ್ ಎಂ, ತಾವು ಐಪಿಎಸ್ ತರಬೇತಿಯಲ್ಲಿದ್ದಾಗ ಅಕಾಡೆಮಿಯಲ್ಲಿ, ಪೊಲೀಸರು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಮೊದಲು ಸಮಾಜಕ್ಕಾಗಿ ಕರ್ತವ್ಯ ನಿರ್ವಹಿಸಬೇಕು,ಎರಡನೇಯದಾಗಿ ತಮ್ಮ ಜೊತೆಯಲ್ಲಿರುವ ಸಹೋದ್ಯೋಗಿಗಳ ರಕ್ಷಣೆಗೆ ಮತ್ತು ಅಂತಿಮವಾಗಿ ತನ್ನ ಪ್ರಾಣದ ಕುರಿತು ಯೋಚಿಸಬೇಕು ಎಂದು ತಿಳಿಸಿದ್ದರು , ಪೊಲೀಸರು ಎಂದೆ0ದಿಗೂ ಅದೇ ರೀತಿ ಕರ್ತವ್ಯ ನಿರ್ವಹಿಸುತ್ತಾರೆ ಎಂದರು.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

2 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

2 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

4 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

4 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

4 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

5 hours ago