ಉಡುಪಿ: ಇಲ್ಲಿನ ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಸೋಮವಾರ(ಸೆ.23) ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ.
ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಟ್ಟಡ ನವೀಕರಣ ಕೆಲಸ ನಡೆಯುತ್ತಿತ್ತು ಎಂಬುದು ತಿಳಿದು ಬಂದಿದ್ದು, ಇಲ್ಲಿ ಅದೃಷ್ಟವಶಾತ್ ರೋಗಿಗಳು ಯಾರೂ ಇರಲಿಲ್ಲ. ಬೆಳಗ್ಗೆ ದೈನಂದಿನ ಕೆಲಸಕ್ಕೆ ಬರುವರು ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭಿಸುವಾಗ ಹಾಲ್ ನೊಳಗೆ ಶಬ್ದ ಕೇಳಿ ಬಂದಿದ್ದು ಹೊರಗೆ ಬಂದು ನೋಡುವಾಗ ಬೆಂಕಿ ಹತ್ತಿಕೊಂಡಿತ್ತು.
ಕೂಡಲೇ ವೈದ್ಯರಿಗೆ ಫೋನ್ ಮಾಡಿ ತಿಳಿಸಿದ್ದು, ಅಗ್ನಿಶಾಮಕ ದಳದವರಿಗೆ ತಿಳಿಸಲಾಗಿದೆ. ಮೊದಲ ಫ್ಲೋರ್ ನಲ್ಲಿ ಇಬ್ಬರು ಕೆಲಸದವರು ಉಳಿದುಕೊಂಡಿದ್ದು ಅವರು ಹೊರಗೆ ಬಂದಿರುವರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಂತ ಹೇಳಲಾಗಿದ್ದು, ಎರಡು ಫೈರ್ ಎಂಜಿನ್ ಗಳನ್ನು ಬಳಸಿ ಕಾರ್ಯಾಚರಣೆ ಮಾಡುತ್ತಿದ್ದಾರೆ.
ಅಗ್ನಿಶಾಮಕ ದಳದ ತ್ವರಿತ ಕಾರ್ಯಾಚರಣೆಯಿಂದ ಬೆಂಕಿ ತಹಬದಿಗೆ ಬಂದಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ…
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…