Featured

ಉಡುಪಿ, ದ.ಕ.: ಅವಶ್ಯಕತೆಗೆ ತಕ್ಕಂತೆ ಸರಕಾರ ಅನುದಾನ ನೀಡಲು ಸಿದ್ಧ : CM ಸಿದ್ದರಾಮಯ್ಯ – Vishwanews24

ಉಡುಪಿ, ದ.ಕ.: ಅವಶ್ಯಕತೆಗೆ ತಕ್ಕಂತೆ ಸರಕಾರ ಅನುದಾನ ನೀಡಲು ಸಿದ್ಧವಿದೆ : CM ಸಿದ್ದರಾಮಯ್ಯ

ಉಡುಪಿ/ ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ನಗರ ಮತ್ತು ಗ್ರಾಮೀಣ ಜನತೆಗೆ ಕುಡಿಯುವ ನೀರಿಗೆ ಯಾವುದೇ ಕೊರತೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್‌ ನೀರು ಸರಬರಾಜು ಮಾಡಬೇಕು. ಆವಶ್ಯಕತೆಗೆ ತಕ್ಕಂತೆ ಸರಕಾರ ಅನುದಾನ ನೀಡಲು ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ತಿಳಿಸಿದ್ದಾರೆ.

ಟ್ಯಾಂಕರ್‌ ಮೂಲಕ ಕುಡಿಯುವ ನೀರಿನ ಪೂರೈಕೆ ಮುಂದುವರಿಸುವಂತೆ ಸೂಚನೆ ನೀಡಿದ ಸಿಎಂ, ಅನುದಾನಕ್ಕೆ ಕೊರತೆ ಇಲ್ಲ. ಜನರಿಗೆ ಯಾವುದೇ ತೊಂದರೆ ಎದುರಾಗದಂತೆ ಎಚ್ಚರ ವಹಿಸಬೇಕು. ಮಳೆ ಸುರಿದಿದೆ ಅಂದ ಮಾತ್ರಕ್ಕೆ ಕುಡಿಯುವ ನೀರು ಒಮ್ಮೆಲೆ ಸಿಗಲು ಸಾಧ್ಯವಿಲ್ಲ . ಹೀಗಾಗಿ ಲಭ್ಯವಿರುವ ನೀರನ್ನು ಬಳಸುವಂತೆ ಸೂಚಿಸಿದರು.

ಉಡುಪಿ ಜಿಲ್ಲೆಯ 58 ಗ್ರಾ.ಪಂ.ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇತ್ತು. ಪ್ರಸ್ತುತ ಹೆಚ್ಚುವರಿಯಾಗಿ ಯಾವ ಗ್ರಾಮಗಳಿಂದಲೂ ನೀರಿನ ಸಮಸ್ಯೆಯ ಬಗ್ಗೆ ದೂರುಗಳು ಬಂದಿಲ್ಲ. ಈ ನಡುವೆ ಮಳೆ ಆರಂಭಗೊಂಡ ಕಾರಣ ಮುಂದಿನ ದಿನದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದು ಎಂದು ಜಿ.ಪಂ. ಸಿಇಒ ಪ್ರಸನ್ನ ಎಚ್‌. ತಿಳಿಸಿದರು

ದ.ಕ ಜಿಲ್ಲೆಯ ಸ್ಥಿತಿಗತಿ ವಿವರಣೆ ನೀಡಿದ ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಜಿಲ್ಲೆಯಲ್ಲಿ ಜೂ. 8ರ ಬಳಿಕ ಉತ್ತಮ ಮಳೆಯಾಗುತ್ತಿದೆ. ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟ 4.6 ಮೀ. ಹಾಗೂ ಎಎಂಆರ್‌ ಡ್ಯಾಂನಲ್ಲಿ 18 ಮೀ.ಗೆ ಏರಿಕೆಯಾಗಿದೆ. ಹಾಗಾಗಿ ನೀರಿಗೆ ಸದ್ಯ ಸಮಸ್ಯೆ ಇಲ್ಲ, ಈಗಾಗಲೇ ಮಂಗಳೂರು ನಗರಕ್ಕೆ ನೀರಿನ ರೇಷನಿಂಗ್‌ ನಿಲ್ಲಿಸಲಾಗಿದೆ. ಎತ್ತರದ ಪ್ರದೇಶಗಳಲ್ಲಿ 13 ಟ್ಯಾಂಕರ್‌ ಮೂಲಕ ನೀರಿನ ವಿತರಣೆ ಮಾಡಲಾಗುತ್ತಿದೆ ಎಂದರು.

ಗ್ರಾಮೀಣ ಭಾಗದ 22 ಗ್ರಾಮಗಳ ಪೈಕಿ 7 ಕಡೆ ಖಾಸಗಿ ಬೋರ್‌ವೆಲ್‌ಗ‌ಳನ್ನು ಪಡೆದುಕೊಂಡು ನೀರು ಪೂರೈಕೆ ಮಾಡಲಾಗುತ್ತಿದೆ, ಉಳಿದ 15 ಕಡೆ ಸರಕಾರದಿಂದ ಸಿಕ್ಕಿರುವ 1 ಕೋಟಿ ರೂ. ಅನುದಾನ ಹಾಗೂ ಜಿಲ್ಲಾಡಳಿತದಿಂದ 30 ಲಕ್ಷ ರೂ. ಸೇರಿಸಿಕೊಂಡು ಟ್ಯಾಂಕರ್‌ ಮೂಲಕ ನೀರು ಒದಗಿಸಲಾಗುತ್ತಿದೆ ಎಂದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

20 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

21 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

21 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

21 hours ago