ಉಡುಪಿ: ರಾಜ್ಯ ಸರ್ಕಾರ ರಚಿಸಿರುವ ಸ್ಪೆಷಲ್ ಆಕ್ಷನ್ ಫೋರ್ಸ್ ಕುರಿತು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಕೆಲವು ಪ್ರಶ್ನೆಗಳನ್ನು ಎತ್ತಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, “ಎಸ್ಎಎಫ್ ವಿಶೇಷ ಕಾರ್ಯಪಡೆ ಯಾಕೆ? ಈ ವಿಶೇಷ ಪೊಲೀಸ್ ಕಾರ್ಯಪಡೆಗೆ ಕಾನೂನಿನಲ್ಲಿ ಯಾವ ಮಾನ್ಯತೆ ಇದೆ?” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿದರು.
ಕಳೆದ ವರ್ಷದ ಜೂನ್ ತಿಂಗಳಲ್ಲಿ ಸರ್ಕಾರ ಸ್ಪೆಷಲ್ ಆಕ್ಷನ್ ಫೋರ್ಸ್ ಅನ್ನು ರಚಿಸಿತ್ತು. ನಕ್ಸಲ್ ನಿಗ್ರಹಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದ ಎಎನ್ಎಫ್ ಅಗತ್ಯವಿಲ್ಲ ಎಂದು ಹೇಳಿ, ಅದರ ಸಿಬ್ಬಂದಿಯನ್ನು ಕಡಿತಗೊಳಿಸಿ ಎಸ್ಎಎಫ್ ರಚಿಸಲಾಗಿತ್ತು.
ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಎಸ್ಎಎಫ್ ಅನ್ನು ನಿಯೋಜಿಸಲಾಗಿತ್ತು. ಎಸ್ಎಎಫ್ ಸ್ಥಾಪನೆಯಾದ ಕೇವಲ 20 ದಿನಗಳಲ್ಲಿ ಚೆನ್ನಯ್ಯನನ್ನು ಬಂಧಿಸಲಾಗಿತ್ತು. “ಬುರುಡೆ ಗ್ಯಾಂಗ್ಗೆ ವಿಶೇಷ ರಕ್ಷಣೆ ನೀಡಲು ಎಸ್ಎಎಫ್ ಸ್ಥಾಪಿಸಲಾಗಿತ್ತೇ? ಎಂದು ಅವರು ಪ್ರಶ್ನಿಸಿದ್ದಾರೆ.
ಈ ವಿಶೇಷ ಕಾರ್ಯಪಡೆಯನ್ನು ಬಿಳಿಯಾನೆಯಂತೆ ನಿರ್ವಹಿಸುವ ಬದಲು ರದ್ದುಪಡಿಸಿ, ಅದರ ಅನುದಾನವನ್ನು ಸರ್ಕಾರದ ಯೋಜನೆಗಳಿಗೆ ಬಳಸಬೇಕು ಎಂದು ಅನುಪಮಾ ಶೆಣೈ ಸರ್ಕಾರವನ್ನು ಆಗ್ರಹಿಸಿದರು.
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…
ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ : 18 ತಿಂಗಳ ಮಗು ನಿಧನ ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ:…
ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…
ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…