ಉಡುಪಿ: ರಾಜ್ಯ ಸರ್ಕಾರ ರಚಿಸಿರುವ ಸ್ಪೆಷಲ್ ಆಕ್ಷನ್ ಫೋರ್ಸ್ ಕುರಿತು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಕೆಲವು ಪ್ರಶ್ನೆಗಳನ್ನು ಎತ್ತಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, “ಎಸ್ಎಎಫ್ ವಿಶೇಷ ಕಾರ್ಯಪಡೆ ಯಾಕೆ? ಈ ವಿಶೇಷ ಪೊಲೀಸ್ ಕಾರ್ಯಪಡೆಗೆ ಕಾನೂನಿನಲ್ಲಿ ಯಾವ ಮಾನ್ಯತೆ ಇದೆ?” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿದರು.
ಕಳೆದ ವರ್ಷದ ಜೂನ್ ತಿಂಗಳಲ್ಲಿ ಸರ್ಕಾರ ಸ್ಪೆಷಲ್ ಆಕ್ಷನ್ ಫೋರ್ಸ್ ಅನ್ನು ರಚಿಸಿತ್ತು. ನಕ್ಸಲ್ ನಿಗ್ರಹಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದ ಎಎನ್ಎಫ್ ಅಗತ್ಯವಿಲ್ಲ ಎಂದು ಹೇಳಿ, ಅದರ ಸಿಬ್ಬಂದಿಯನ್ನು ಕಡಿತಗೊಳಿಸಿ ಎಸ್ಎಎಫ್ ರಚಿಸಲಾಗಿತ್ತು.
ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಎಸ್ಎಎಫ್ ಅನ್ನು ನಿಯೋಜಿಸಲಾಗಿತ್ತು. ಎಸ್ಎಎಫ್ ಸ್ಥಾಪನೆಯಾದ ಕೇವಲ 20 ದಿನಗಳಲ್ಲಿ ಚೆನ್ನಯ್ಯನನ್ನು ಬಂಧಿಸಲಾಗಿತ್ತು. “ಬುರುಡೆ ಗ್ಯಾಂಗ್ಗೆ ವಿಶೇಷ ರಕ್ಷಣೆ ನೀಡಲು ಎಸ್ಎಎಫ್ ಸ್ಥಾಪಿಸಲಾಗಿತ್ತೇ? ಎಂದು ಅವರು ಪ್ರಶ್ನಿಸಿದ್ದಾರೆ.
ಈ ವಿಶೇಷ ಕಾರ್ಯಪಡೆಯನ್ನು ಬಿಳಿಯಾನೆಯಂತೆ ನಿರ್ವಹಿಸುವ ಬದಲು ರದ್ದುಪಡಿಸಿ, ಅದರ ಅನುದಾನವನ್ನು ಸರ್ಕಾರದ ಯೋಜನೆಗಳಿಗೆ ಬಳಸಬೇಕು ಎಂದು ಅನುಪಮಾ ಶೆಣೈ ಸರ್ಕಾರವನ್ನು ಆಗ್ರಹಿಸಿದರು.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…