ಉಡುಪಿ : ಧರ್ಮಸ್ಥಳ ವಿರುದ್ಧ ಷಡ್ಯಂತ್ತ ನಡೆಯುತ್ತಿದೆ ಎಂಬ ಉಪಮುಖ್ಯಮಂತ್ರಿ ಡಿಕೆಶಿ ಅವರ ಮಾತಿಗೆ ದನಿಗೂಡಿಸಿರುವ ಸಚಿವೆ ,ಲಕ್ಷ್ಮೀ ಹೆಬ್ಬಾಳ್ಕರ್ ಎಲ್ಲ ಷಡ್ಯಂತ್ರ ಮತ್ತು ಅಪಪ್ರಚಾರಗಳಿಗೆ ಪೂರ್ಣ ವಿರಾಮ ಬೀಳಲೇಬೇಕು ಎಂದು ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾವೆಲ್ಲ ಧರ್ಮಸ್ಥಳದ ಭಕ್ತರು. ಹೆಗ್ಗಡೆಯವರ ಸಾಮಾಜಿಕ ಕೆಲಸ ಮೆಚ್ಚಿಕೊಂಡವರು. ಇದೀಗ ಎಸ್ಐಟಿ ತನಿಖೆ ನಡೆಯುತ್ತಿದೆ. ಷಡ್ಯಂತ್ರದ ಬಗ್ಗೆ ಡಿಸಿಎಂ ಅವರಿಗೆ ಗೊತ್ತಿದೆ. ನಾನು ಅವರ ಹೇಳಿಕೆಗೆ ದನಿಗೂಡಿಸುತ್ತೇನೆ. ಸದನದ ಒಳಗೂ ಡಿಕೆಶಿ ಷಡ್ಯಂತ್ರ ಅಂತ ಹೇಳಿದ್ದಾರೆ. ಎಲ್ಲದಕ್ಕೂ ಪೂರ್ಣವಿರಾಮ ಬೇಕು ಎಂದು ಹೇಳಿದರು.
ಷಡ್ಯಂತ್ರ ಮಾಡಿದವರಿಗೆ ಅಲ್ಲಿ ಏನೂ ಇಲ್ಲ ಎಲ್ಲ ಭೋಗಸ್ ಎಂದು ಗೊತ್ತಾಗಬೇಕು. ಸೋಶಿಯಲ್ ಮೀಡಿಯಾಗಳಲ್ಲೂ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ,ಇದನ್ನು ನೀವೂ ಗಮನಿಸಿರಬಹುದು. ಸೌಜನ್ಯ ವಿಚಾರದಲ್ಲಿ ಒಬ್ಬ ಹೆಣ್ಣುಮಗಳಾಗಿ ನಾನು ಅವಳ ನ್ಯಾಯಕ್ಕೆ ಒತ್ತಾಯಿಸುತ್ತೇನೆ. ಆದರೆ ಈ ಅನಾಮಿಕ ಯಾರು? ಇವತ್ತು ಇಲ್ಲಿ ತೋರಿಸ್ತಾನೆ , ನಾಳೆ ಅಲ್ಲಿ ಇದೆ ಅಂತಾನೆ. ಇದಕ್ಕೆಲ್ಲ ಒಂದು ಪೂರ್ಣವಿರಾಮ ಬೇಕು ಎಂದು ಹೆಬ್ಬಾಳ್ಕರ್ ಹೇಳಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…