ಉಡುಪಿ : ಧರ್ಮಸ್ಥಳ ವಿರುದ್ಧ ಷಡ್ಯಂತ್ತ ನಡೆಯುತ್ತಿದೆ ಎಂಬ ಉಪಮುಖ್ಯಮಂತ್ರಿ ಡಿಕೆಶಿ ಅವರ ಮಾತಿಗೆ ದನಿಗೂಡಿಸಿರುವ ಸಚಿವೆ ,ಲಕ್ಷ್ಮೀ ಹೆಬ್ಬಾಳ್ಕರ್ ಎಲ್ಲ ಷಡ್ಯಂತ್ರ ಮತ್ತು ಅಪಪ್ರಚಾರಗಳಿಗೆ ಪೂರ್ಣ ವಿರಾಮ ಬೀಳಲೇಬೇಕು ಎಂದು ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾವೆಲ್ಲ ಧರ್ಮಸ್ಥಳದ ಭಕ್ತರು. ಹೆಗ್ಗಡೆಯವರ ಸಾಮಾಜಿಕ ಕೆಲಸ ಮೆಚ್ಚಿಕೊಂಡವರು. ಇದೀಗ ಎಸ್ಐಟಿ ತನಿಖೆ ನಡೆಯುತ್ತಿದೆ. ಷಡ್ಯಂತ್ರದ ಬಗ್ಗೆ ಡಿಸಿಎಂ ಅವರಿಗೆ ಗೊತ್ತಿದೆ. ನಾನು ಅವರ ಹೇಳಿಕೆಗೆ ದನಿಗೂಡಿಸುತ್ತೇನೆ. ಸದನದ ಒಳಗೂ ಡಿಕೆಶಿ ಷಡ್ಯಂತ್ರ ಅಂತ ಹೇಳಿದ್ದಾರೆ. ಎಲ್ಲದಕ್ಕೂ ಪೂರ್ಣವಿರಾಮ ಬೇಕು ಎಂದು ಹೇಳಿದರು.
ಷಡ್ಯಂತ್ರ ಮಾಡಿದವರಿಗೆ ಅಲ್ಲಿ ಏನೂ ಇಲ್ಲ ಎಲ್ಲ ಭೋಗಸ್ ಎಂದು ಗೊತ್ತಾಗಬೇಕು. ಸೋಶಿಯಲ್ ಮೀಡಿಯಾಗಳಲ್ಲೂ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ,ಇದನ್ನು ನೀವೂ ಗಮನಿಸಿರಬಹುದು. ಸೌಜನ್ಯ ವಿಚಾರದಲ್ಲಿ ಒಬ್ಬ ಹೆಣ್ಣುಮಗಳಾಗಿ ನಾನು ಅವಳ ನ್ಯಾಯಕ್ಕೆ ಒತ್ತಾಯಿಸುತ್ತೇನೆ. ಆದರೆ ಈ ಅನಾಮಿಕ ಯಾರು? ಇವತ್ತು ಇಲ್ಲಿ ತೋರಿಸ್ತಾನೆ , ನಾಳೆ ಅಲ್ಲಿ ಇದೆ ಅಂತಾನೆ. ಇದಕ್ಕೆಲ್ಲ ಒಂದು ಪೂರ್ಣವಿರಾಮ ಬೇಕು ಎಂದು ಹೆಬ್ಬಾಳ್ಕರ್ ಹೇಳಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…