ಉಡುಪಿ :ಧಾರಾಕಾರ ಸುರಿದ ಮಳೆ ; ಮನೆಗೆ ಸಿಡಿಲು ಬಡಿದು ಲಕ್ಷಾಂತರ ರೂ.ನಷ್ಟ -Vishwanews24
ಉಡುಪಿ :ಧಾರಾಕಾರ ಸುರಿದ ಮಳೆ ; ಮನೆಗೆ ಸಿಡಿಲು ಬಡಿದು ಲಕ್ಷಾಂತರ ರೂ.ನಷ್ಟ -Vishwanews24
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಮತ್ತು ಮಂಗಳವಾರ ಮುಂಜಾನೆ ಧಾರಾಕಾರ ಮಳೆ ಸುರಿದು ಮನೆ ಹಾನಿಯಾಗಿ, ಮರಗಳು ಬಿದ್ದ ಘಟನೆ ನಡೆದಿದೆ.
ಮಿಂಚಿನಿಂದಾಗಿ ಬ್ರಹ್ಮಾವರ ತಾಲೂಕಿನ ನಾಗರತ್ನ ಭುಜಂಗ ಶೆಟ್ಟಿಗೆ ಸೇರಿದ ಮನೆ ಹಾನಿಯಾಗಿದ್ದು, ಘಟನೆ ನಡೆದಾಗ ಮನೆಯಲ್ಲಿ 6 ಜನರಿದ್ದು ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಮನೆಯ ಅನೇಕ ಉಪಕರಣಗಳು ಹಾನಿಗೊಂಡಿವೆ.
ಕಾಪು, ಉಡುಪಿ ಮತ್ತು ಕಾರ್ಕಳ ತಾಲೂಕಿನ ಅನೇಕ ಭಾಗಗಳಲ್ಲಿ ಮಳೆಯಾಗಿದೆ.
ಕೆಮ್ಮಣ್ಣುವಿನಲ್ಲಿ ಮರವೊಂದು ಮುಖ್ಯ ರಸ್ತೆಯಲ್ಲಿ ಬಿದ್ದಿದ್ದು, ಸಂಚಾರ ವ್ಯವಸ್ಥೆ ಸ್ಥಗಿತಗೊಳಿಸಿ ಬಳಿಕ ಸ್ಥಳೀಯ ಪಂಚಾಯತ್ ಸದಸ್ಯರು ಮತ್ತು ಜನರು ರಸ್ತೆಯಿಂದ ಮರವನ್ನು ತೆರವುಗೊಳಿಸಿದ್ದಾರೆ.



