ಉಡುಪಿ: ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿದ ಆದೇಶದಿಂದ ರಾಜ್ಯದ ವೈಷ್ಣವರು ಕೋಪಗೊಂಡಿದ್ದಾರೆ. ಆದೇಶದ ಪ್ರಕಾರ ಮುಜರಾಯಿ ಇಲಾಖೆಯ ದೇಗುಲಗಳಲ್ಲಿ ಮುದ್ರಾಧಾರಣೆ ಮಾಡಬಾರದಂತೆ. ದೇವರ ಫೋಟೋ ಇಟ್ಟು ಧಾರ್ಮಿಕ ಕಾರ್ಯಕ್ರಮ ಮಾಡಬಾರದಂತೆ.
ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಾಲಯಗಳಲ್ಲಿ ಮುದ್ರಾ ಧಾರಣೆ, ಯಾವುದೇ ಜಯಂತಿ ಆಚರಣೆಗಳಿಗೆ ಅವಕಾಶವಿಲ್ಲ ಎಂದು ಆಯುಕ್ತರು ಆದೇಶ ಮಾಡಿದ್ದಾರೆ. ವೈಷ್ಣವರ ಪ್ರಧಾನ ಸಂಪ್ರದಾಯ ತಪ್ತ ಮುದ್ರಾಧಾರಣೆ ಸಂಪ್ರದಾಯವನ್ನು ಸರ್ಕಾರಿ ದೇಗುಲದಲ್ಲಿ ಮಾಡಬಾರದು ಎಂಬ ಆದೇಶಕ್ಕೆ ಮಾಧ್ವ ಸಂಪ್ರದಾಯಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಯಾ ದೇವಾಲಯಗಳಲ್ಲಿ ಚಾಲ್ತಿಯಲ್ಲಿರುವ ಪದ್ಧತಿ ಸಂಪ್ರದಾಯಗಳಿಗೆ ವಿರುದ್ಧವಾದ ಆಚರಣೆ ನಡೆಸುವಂತಿಲ್ಲ ಎಂಬ ಆದೇಶಕ್ಕೆ ಮಾಧ್ವರು ಗರಂ ಆಗಿದ್ದಾರೆ. ಇದನ್ನೂ ಓದಿ: ಮಡಿಕೇರಿ: ಶವಾಗಾರದಲ್ಲಿ ಆಸ್ಪತ್ರೆ ಯುವತಿ ಹಾಗೂ ಮಹಿಳೆಯರ ಜತೆ ಕಾಮದಾಟ ..
ಕರ್ನಾಟಕದ ಕರಾವಳಿ, ಬೆಂಗಳೂರು ಮೈಸೂರು ಉತ್ತರ ಕರ್ನಾಟಕ ದ ಹಲವು ಜಿಲ್ಲೆಗಳಲ್ಲಿ ಮಾಧ್ವ ತತ್ವ ಅನುಸರಿಸುವ ಬ್ರಾಹ್ಮಣರಿದ್ದಾರೆ. ಶಿವನ ದೇಗುಲ, ದೇವಿ ದೇವಸ್ಥಾನಗಳಲ್ಲಿ ಆ ಪರಂಪರೆಯ ಸಂಪ್ರದಾಯದ ಆಚರಣೆ ಹೊರತುಪಡಿಸಿ ಮತ್ಯಾವುದೇ ಧಾರ್ಮಿಕ ಪೂಜೆ ಪುನಸ್ಕಾರ ಮಾಡಬಾರದು ಎಂಬುದು ಈ ಆದೇಶದ ಮುಖ್ಯ ವಿಷಯ. ಅದ್ವೈತ, ವಿಶಿಷ್ಟಾದ್ವೈತ, ದೇಗುಲದಲ್ಲಿ ತಪ್ತಮುದ್ರಾಧಾರಣೆ ಫೋಟೋಗಳನ್ನು ಇಟ್ಟು ಮಾಡುವ ಆರಾಧನೆ ನಡೆಸಕೂಡದು ಎಂಬ ಆದೇಶ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ತ್ರಿಮತಸ್ಥ ಬ್ರಾಹ್ಮಣ ಪಂಗಡಗಳ ನಡುವೆ ಒಡಕುಂಟುಮಾಡಲು ಪಿತೂರಿ ಮಾಡಿದ್ದಾರೆ. ಹುಳಿ ಹಿಂಡುವ ಕೆಲಸ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಜನವರಿಯಿಂದ ಕರಾವಳಿ ಜಿಲ್ಲೆಗಳಲ್ಲಿ ಪಡಿತರದಲ್ಲಿ ಕುಚಲಕ್ಕಿ ಲಭ್ಯ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…