ಉಡುಪಿ: ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿದ ಆದೇಶದಿಂದ ರಾಜ್ಯದ ವೈಷ್ಣವರು ಕೋಪಗೊಂಡಿದ್ದಾರೆ. ಆದೇಶದ ಪ್ರಕಾರ ಮುಜರಾಯಿ ಇಲಾಖೆಯ ದೇಗುಲಗಳಲ್ಲಿ ಮುದ್ರಾಧಾರಣೆ ಮಾಡಬಾರದಂತೆ. ದೇವರ ಫೋಟೋ ಇಟ್ಟು ಧಾರ್ಮಿಕ ಕಾರ್ಯಕ್ರಮ ಮಾಡಬಾರದಂತೆ.
ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಾಲಯಗಳಲ್ಲಿ ಮುದ್ರಾ ಧಾರಣೆ, ಯಾವುದೇ ಜಯಂತಿ ಆಚರಣೆಗಳಿಗೆ ಅವಕಾಶವಿಲ್ಲ ಎಂದು ಆಯುಕ್ತರು ಆದೇಶ ಮಾಡಿದ್ದಾರೆ. ವೈಷ್ಣವರ ಪ್ರಧಾನ ಸಂಪ್ರದಾಯ ತಪ್ತ ಮುದ್ರಾಧಾರಣೆ ಸಂಪ್ರದಾಯವನ್ನು ಸರ್ಕಾರಿ ದೇಗುಲದಲ್ಲಿ ಮಾಡಬಾರದು ಎಂಬ ಆದೇಶಕ್ಕೆ ಮಾಧ್ವ ಸಂಪ್ರದಾಯಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಯಾ ದೇವಾಲಯಗಳಲ್ಲಿ ಚಾಲ್ತಿಯಲ್ಲಿರುವ ಪದ್ಧತಿ ಸಂಪ್ರದಾಯಗಳಿಗೆ ವಿರುದ್ಧವಾದ ಆಚರಣೆ ನಡೆಸುವಂತಿಲ್ಲ ಎಂಬ ಆದೇಶಕ್ಕೆ ಮಾಧ್ವರು ಗರಂ ಆಗಿದ್ದಾರೆ. ಇದನ್ನೂ ಓದಿ: ಮಡಿಕೇರಿ: ಶವಾಗಾರದಲ್ಲಿ ಆಸ್ಪತ್ರೆ ಯುವತಿ ಹಾಗೂ ಮಹಿಳೆಯರ ಜತೆ ಕಾಮದಾಟ ..
ಕರ್ನಾಟಕದ ಕರಾವಳಿ, ಬೆಂಗಳೂರು ಮೈಸೂರು ಉತ್ತರ ಕರ್ನಾಟಕ ದ ಹಲವು ಜಿಲ್ಲೆಗಳಲ್ಲಿ ಮಾಧ್ವ ತತ್ವ ಅನುಸರಿಸುವ ಬ್ರಾಹ್ಮಣರಿದ್ದಾರೆ. ಶಿವನ ದೇಗುಲ, ದೇವಿ ದೇವಸ್ಥಾನಗಳಲ್ಲಿ ಆ ಪರಂಪರೆಯ ಸಂಪ್ರದಾಯದ ಆಚರಣೆ ಹೊರತುಪಡಿಸಿ ಮತ್ಯಾವುದೇ ಧಾರ್ಮಿಕ ಪೂಜೆ ಪುನಸ್ಕಾರ ಮಾಡಬಾರದು ಎಂಬುದು ಈ ಆದೇಶದ ಮುಖ್ಯ ವಿಷಯ. ಅದ್ವೈತ, ವಿಶಿಷ್ಟಾದ್ವೈತ, ದೇಗುಲದಲ್ಲಿ ತಪ್ತಮುದ್ರಾಧಾರಣೆ ಫೋಟೋಗಳನ್ನು ಇಟ್ಟು ಮಾಡುವ ಆರಾಧನೆ ನಡೆಸಕೂಡದು ಎಂಬ ಆದೇಶ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ತ್ರಿಮತಸ್ಥ ಬ್ರಾಹ್ಮಣ ಪಂಗಡಗಳ ನಡುವೆ ಒಡಕುಂಟುಮಾಡಲು ಪಿತೂರಿ ಮಾಡಿದ್ದಾರೆ. ಹುಳಿ ಹಿಂಡುವ ಕೆಲಸ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಜನವರಿಯಿಂದ ಕರಾವಳಿ ಜಿಲ್ಲೆಗಳಲ್ಲಿ ಪಡಿತರದಲ್ಲಿ ಕುಚಲಕ್ಕಿ ಲಭ್ಯ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…