Featured

ಉಡುಪಿ: ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಾಲಯಗಳಲ್ಲಿ ಮುದ್ರಾ ಧಾರಣೆ, ಯಾವುದೇ ಜಯಂತಿ ಆಚರಣೆಗಳಿಗೆ ಅವಕಾಶವಿಲ್ಲ – Vishwanews24

ಉಡುಪಿ: ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಾಲಯಗಳಲ್ಲಿ ಮುದ್ರಾ ಧಾರಣೆ, ಯಾವುದೇ ಜಯಂತಿ ಆಚರಣೆಗಳಿಗೆ ಅವಕಾಶವಿಲ್ಲ

ಉಡುಪಿ: ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿದ ಆದೇಶದಿಂದ ರಾಜ್ಯದ ವೈಷ್ಣವರು ಕೋಪಗೊಂಡಿದ್ದಾರೆ. ಆದೇಶದ ಪ್ರಕಾರ ಮುಜರಾಯಿ ಇಲಾಖೆಯ ದೇಗುಲಗಳಲ್ಲಿ ಮುದ್ರಾಧಾರಣೆ ಮಾಡಬಾರದಂತೆ. ದೇವರ ಫೋಟೋ ಇಟ್ಟು ಧಾರ್ಮಿಕ ಕಾರ್ಯಕ್ರಮ ಮಾಡಬಾರದಂತೆ.

ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಾಲಯಗಳಲ್ಲಿ ಮುದ್ರಾ ಧಾರಣೆ, ಯಾವುದೇ ಜಯಂತಿ ಆಚರಣೆಗಳಿಗೆ ಅವಕಾಶವಿಲ್ಲ ಎಂದು ಆಯುಕ್ತರು ಆದೇಶ ಮಾಡಿದ್ದಾರೆ. ವೈಷ್ಣವರ ಪ್ರಧಾನ ಸಂಪ್ರದಾಯ ತಪ್ತ ಮುದ್ರಾಧಾರಣೆ ಸಂಪ್ರದಾಯವನ್ನು ಸರ್ಕಾರಿ ದೇಗುಲದಲ್ಲಿ ಮಾಡಬಾರದು ಎಂಬ ಆದೇಶಕ್ಕೆ ಮಾಧ್ವ ಸಂಪ್ರದಾಯಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಯಾ ದೇವಾಲಯಗಳಲ್ಲಿ ಚಾಲ್ತಿಯಲ್ಲಿರುವ ಪದ್ಧತಿ ಸಂಪ್ರದಾಯಗಳಿಗೆ ವಿರುದ್ಧವಾದ ಆಚರಣೆ ನಡೆಸುವಂತಿಲ್ಲ ಎಂಬ ಆದೇಶಕ್ಕೆ ಮಾಧ್ವರು ಗರಂ ಆಗಿದ್ದಾರೆ. ಇದನ್ನೂ ಓದಿ: ಮಡಿಕೇರಿ: ಶವಾಗಾರದಲ್ಲಿ ಆಸ್ಪತ್ರೆ ಯುವತಿ ಹಾಗೂ ಮಹಿಳೆಯರ ಜತೆ ಕಾಮದಾಟ ..

ಕರ್ನಾಟಕದ ಕರಾವಳಿ, ಬೆಂಗಳೂರು  ಮೈಸೂರು ಉತ್ತರ ಕರ್ನಾಟಕ ದ ಹಲವು ಜಿಲ್ಲೆಗಳಲ್ಲಿ ಮಾಧ್ವ ತತ್ವ ಅನುಸರಿಸುವ ಬ್ರಾಹ್ಮಣರಿದ್ದಾರೆ. ಶಿವನ ದೇಗುಲ, ದೇವಿ ದೇವಸ್ಥಾನಗಳಲ್ಲಿ ಆ ಪರಂಪರೆಯ ಸಂಪ್ರದಾಯದ ಆಚರಣೆ ಹೊರತುಪಡಿಸಿ ಮತ್ಯಾವುದೇ ಧಾರ್ಮಿಕ ಪೂಜೆ ಪುನಸ್ಕಾರ ಮಾಡಬಾರದು ಎಂಬುದು ಈ ಆದೇಶದ ಮುಖ್ಯ ವಿಷಯ. ಅದ್ವೈತ, ವಿಶಿಷ್ಟಾದ್ವೈತ, ದೇಗುಲದಲ್ಲಿ ತಪ್ತಮುದ್ರಾಧಾರಣೆ ಫೋಟೋಗಳನ್ನು ಇಟ್ಟು ಮಾಡುವ ಆರಾಧನೆ ನಡೆಸಕೂಡದು ಎಂಬ ಆದೇಶ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ತ್ರಿಮತಸ್ಥ ಬ್ರಾಹ್ಮಣ ಪಂಗಡಗಳ ನಡುವೆ ಒಡಕುಂಟುಮಾಡಲು ಪಿತೂರಿ ಮಾಡಿದ್ದಾರೆ. ಹುಳಿ ಹಿಂಡುವ ಕೆಲಸ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.  ಜನವರಿಯಿಂದ ಕರಾವಳಿ ಜಿಲ್ಲೆಗಳಲ್ಲಿ ಪಡಿತರದಲ್ಲಿ ಕುಚಲಕ್ಕಿ ಲಭ್ಯ – Vishwanews24

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

15 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

15 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

15 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

16 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

16 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

16 hours ago