ಉಡುಪಿ: ಉಡುಪಿಯ ಎಲ್ಲೂರು ಯುಪಿಸಿಎಲ್ ವಿದ್ಯುತ್ ಸ್ಥಾವರದಿಂದ ಕೇರಳದ ಕಾಸರಗೋಡಿಗೆ 400 ಕೆವಿ ವಿದ್ಯುತ್ ಲೈನ್ ಯೋಜನೆಯಲ್ಲಿ ಸರಕಾರ ರೈತರಿಗೆ ಅನೂಕೂಲವಾಗುವಂತೆ ಬದಲಾವಣೆ ಮಾಡಿಕೊಳ್ಳಬೇಕು. ಆದ್ದರಿಂದ ತಕ್ಷಣಕ್ಕೆ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಯವರಿಗೆ ನಿರ್ದೇಶನ ನೀಡಬೇಕು ಎಂದು ಶಾಸಕ ವಿ. ಸುನಿಲ್ ಕುಮಾರ್ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರನ್ನು ಒತ್ತಾಯಿಸಿದ್ದಾರೆ.
ಈ ಯೋಜನೆಗೆ ಯಾರ ವಿರೋಧವೂ ಇಲ್ಲ, ಆದರೆ ರೈತರಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ಯೋಜನೆ ಅನುಷ್ಠಾನದ ಕುರಿತಾಗಿ ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ರೈತರು ಆತಂಕದಲ್ಲಿದ್ದಾರೆ, ಕೃಷಿ ಭೂಮಿ ಹಾಗೂ ಸಮೃದ್ಧವಾಗಿ ಬೆಳೆದು ನಿಂತ ಕೃಷಿಗೆ ಹಾನಿಯಾಗದಂತೆ ಸರಕಾರಿ ಭೂಮಿಯಲ್ಲಿ ವಿದ್ಯುತ್ ಲೈನ್ ಮತ್ತು ಟವರ್ ಅಳವಡಿಸಬೇಕು ಎಂಬುದು ರೈತರ ಆಗ್ರಹ, ಅದ್ಯರಿಂದ ರೈತರ ಬೇಡಿಕೆಯಂತೆ ಕೃಷಿ ಭೂಮಿಗೆ ಹಾನಿಯಾಗದಂತೆ ಪರ್ಯಾಯ ಮಾರ್ಗವಾಗಿ ವಿದ್ಯತ್ ಲೈನ್ ಅಳವಡಿಕೆಯ ಬಗ್ಗೆ ಅಧಿಕಾರಿಗಳು ರೈತರೊಂದಿಗೆ ಮಾತುಕತೆ ನಡೆಸಿ ಯೋಜನೆಯಲ್ಲಿ ಬದಲಾವಣೆ ಮಾಡಿಕೊಂಡು ಕಾಮಗಾರಿ ಕೈಗೆತ್ತಿಕೊಳ್ಳುವ ಬಗ್ಗೆ, ಸರಕಾರ ಕಾರ್ಯಪ್ರವೃತ್ತವಾಗಬೇಕು ಎಂದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಇಂಧನ ಸಚಿವರು, ಈ ವಿಚಾರವಾಗಿ ಕೇಂದ್ರ ಸರಕಾರ ರಾಜ್ಯ ಸರಕಾರ ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…