Featured

ಉಡುಪಿ: ನಂದಿಕೂರು ವಿದ್ಯುತ್ ಲೈನ್ ಯೋಜನೆ ಕಾಮಗಾರಿ ತಕ್ಷಣಕ್ಕೆ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿ : ಸುನಿಲ್ ಕುಮಾರ್ ಒತ್ತಾಯ – vishwanews24

ಉಡುಪಿ: ರೈತರಿಗೆ ತೊಂದರೆಯಾಗದಂತೆ ವಿದ್ಯುತ್ ಲೈನ್ ಯೋಜನೆ ಅನುಷ್ಠಾನ ಮಾಡಿ : ಸುನಿಲ್ ಕುಮಾರ್

ಉಡುಪಿ: ಉಡುಪಿಯ ಎಲ್ಲೂರು ಯುಪಿಸಿಎಲ್ ವಿದ್ಯುತ್ ಸ್ಥಾವರದಿಂದ ಕೇರಳದ ಕಾಸರಗೋಡಿಗೆ 400 ಕೆವಿ ವಿದ್ಯುತ್ ಲೈನ್ ಯೋಜನೆಯಲ್ಲಿ ಸರಕಾರ ರೈತರಿಗೆ ಅನೂಕೂಲವಾಗುವಂತೆ ಬದಲಾವಣೆ ಮಾಡಿಕೊಳ್ಳಬೇಕು. ಆದ್ದರಿಂದ ತಕ್ಷಣಕ್ಕೆ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಯವರಿಗೆ ನಿರ್ದೇಶನ ನೀಡಬೇಕು ಎಂದು ಶಾಸಕ ವಿ. ಸುನಿಲ್ ಕುಮಾರ್ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರನ್ನು ಒತ್ತಾಯಿಸಿದ್ದಾರೆ.

ಈ ಯೋಜನೆಗೆ ಯಾರ ವಿರೋಧವೂ ಇಲ್ಲ, ಆದರೆ ರೈತರಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ಯೋಜನೆ ಅನುಷ್ಠಾನದ ಕುರಿತಾಗಿ ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ರೈತರು ಆತಂಕದಲ್ಲಿದ್ದಾರೆ, ಕೃಷಿ ಭೂಮಿ ಹಾಗೂ ಸಮೃದ್ಧವಾಗಿ ಬೆಳೆದು ನಿಂತ ಕೃಷಿಗೆ ಹಾನಿಯಾಗದಂತೆ ಸರಕಾರಿ ಭೂಮಿಯಲ್ಲಿ ವಿದ್ಯುತ್ ಲೈನ್ ಮತ್ತು ಟವರ್ ಅಳವಡಿಸಬೇಕು ಎಂಬುದು ರೈತರ ಆಗ್ರಹ, ಅದ್ಯರಿಂದ ರೈತರ ಬೇಡಿಕೆಯಂತೆ ಕೃಷಿ ಭೂಮಿಗೆ ಹಾನಿಯಾಗದಂತೆ ಪರ್ಯಾಯ ಮಾರ್ಗವಾಗಿ ವಿದ್ಯತ್ ಲೈನ್ ಅಳವಡಿಕೆಯ ಬಗ್ಗೆ ಅಧಿಕಾರಿಗಳು ರೈತರೊಂದಿಗೆ ಮಾತುಕತೆ ನಡೆಸಿ ಯೋಜನೆಯಲ್ಲಿ ಬದಲಾವಣೆ ಮಾಡಿಕೊಂಡು ಕಾಮಗಾರಿ ಕೈಗೆತ್ತಿಕೊಳ್ಳುವ ಬಗ್ಗೆ, ಸರಕಾರ ಕಾರ್ಯಪ್ರವೃತ್ತವಾಗಬೇಕು ಎಂದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಇಂಧನ ಸಚಿವರು, ಈ ವಿಚಾರವಾಗಿ ಕೇಂದ್ರ ಸರಕಾರ ರಾಜ್ಯ ಸರಕಾರ ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದರು.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

13 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

13 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

13 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

16 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

16 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

17 hours ago