Featured

ಉಡುಪಿ: ನಂದಿಕೂರು ವಿದ್ಯುತ್ ಲೈನ್ ಯೋಜನೆ ಕಾಮಗಾರಿ ತಕ್ಷಣಕ್ಕೆ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿ : ಸುನಿಲ್ ಕುಮಾರ್ ಒತ್ತಾಯ – vishwanews24

ಉಡುಪಿ: ರೈತರಿಗೆ ತೊಂದರೆಯಾಗದಂತೆ ವಿದ್ಯುತ್ ಲೈನ್ ಯೋಜನೆ ಅನುಷ್ಠಾನ ಮಾಡಿ : ಸುನಿಲ್ ಕುಮಾರ್

ಉಡುಪಿ: ಉಡುಪಿಯ ಎಲ್ಲೂರು ಯುಪಿಸಿಎಲ್ ವಿದ್ಯುತ್ ಸ್ಥಾವರದಿಂದ ಕೇರಳದ ಕಾಸರಗೋಡಿಗೆ 400 ಕೆವಿ ವಿದ್ಯುತ್ ಲೈನ್ ಯೋಜನೆಯಲ್ಲಿ ಸರಕಾರ ರೈತರಿಗೆ ಅನೂಕೂಲವಾಗುವಂತೆ ಬದಲಾವಣೆ ಮಾಡಿಕೊಳ್ಳಬೇಕು. ಆದ್ದರಿಂದ ತಕ್ಷಣಕ್ಕೆ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಯವರಿಗೆ ನಿರ್ದೇಶನ ನೀಡಬೇಕು ಎಂದು ಶಾಸಕ ವಿ. ಸುನಿಲ್ ಕುಮಾರ್ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರನ್ನು ಒತ್ತಾಯಿಸಿದ್ದಾರೆ.

ಈ ಯೋಜನೆಗೆ ಯಾರ ವಿರೋಧವೂ ಇಲ್ಲ, ಆದರೆ ರೈತರಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ಯೋಜನೆ ಅನುಷ್ಠಾನದ ಕುರಿತಾಗಿ ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ರೈತರು ಆತಂಕದಲ್ಲಿದ್ದಾರೆ, ಕೃಷಿ ಭೂಮಿ ಹಾಗೂ ಸಮೃದ್ಧವಾಗಿ ಬೆಳೆದು ನಿಂತ ಕೃಷಿಗೆ ಹಾನಿಯಾಗದಂತೆ ಸರಕಾರಿ ಭೂಮಿಯಲ್ಲಿ ವಿದ್ಯುತ್ ಲೈನ್ ಮತ್ತು ಟವರ್ ಅಳವಡಿಸಬೇಕು ಎಂಬುದು ರೈತರ ಆಗ್ರಹ, ಅದ್ಯರಿಂದ ರೈತರ ಬೇಡಿಕೆಯಂತೆ ಕೃಷಿ ಭೂಮಿಗೆ ಹಾನಿಯಾಗದಂತೆ ಪರ್ಯಾಯ ಮಾರ್ಗವಾಗಿ ವಿದ್ಯತ್ ಲೈನ್ ಅಳವಡಿಕೆಯ ಬಗ್ಗೆ ಅಧಿಕಾರಿಗಳು ರೈತರೊಂದಿಗೆ ಮಾತುಕತೆ ನಡೆಸಿ ಯೋಜನೆಯಲ್ಲಿ ಬದಲಾವಣೆ ಮಾಡಿಕೊಂಡು ಕಾಮಗಾರಿ ಕೈಗೆತ್ತಿಕೊಳ್ಳುವ ಬಗ್ಗೆ, ಸರಕಾರ ಕಾರ್ಯಪ್ರವೃತ್ತವಾಗಬೇಕು ಎಂದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಇಂಧನ ಸಚಿವರು, ಈ ವಿಚಾರವಾಗಿ ಕೇಂದ್ರ ಸರಕಾರ ರಾಜ್ಯ ಸರಕಾರ ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದರು.

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

4 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

4 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

5 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

5 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago