Featured

ಉಡುಪಿ : ನಕ್ಷತ್ರಗಳ ಚಲನೆಯನ್ನು ಗುರುತಿಸಬಹುದಾದ ಪ್ಲಾನಿಸ್ಪಿಯರ್ ನಕ್ಷೆ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರಿಂದ ಅನಾವರಣ -Vishwanews24

ಉಡುಪಿ : ನಕ್ಷತ್ರಗಳ ಚಲನೆಯನ್ನು ಗುರುತಿಸಬಹುದಾದ ಪ್ಲಾನಿಸ್ಪಿಯರ್ ನಕ್ಷೆ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರಿಂದ ಅನಾವರಣ -Vishwanews24

ಉಡುಪಿ: ಆಕಾಶದಲ್ಲಿ ನಕ್ಷತ್ರಗಳ ಚಲನೆಯನ್ನು ಗುರುತಿಸಬಹುದಾದ ಪ್ಲಾನಿಸ್ಪಿಯರ್ ಎಂಬ ನಕ್ಷೆಯನ್ನು ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಉಡುಪಿಯಲ್ಲಿ ಅನಾವರಣಗೊಳಿಸಿದ್ದಾರೆ.

ಇದೇ ವೇಳೆ ಒಂದು ವರ್ಷ ಪೂರ್ಣಗೊಳಿಸಿರುವ ಪಿಎಎಸಿ (ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘ) ವೆಬ್ ಸೈಟ್‌ಗೆ ಹಾಗೂ ಪ್ರೋತ್ಸಾಹ ನೀಡುತ್ತಿರುವ ತಂಡಕ್ಕೆ ಶ್ರೀಪಾದರು ಆಶೀರ್ವದಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಪಿಎಎಸಿ ತನ್ನ ವೆಬ್ ಸೈಟ್ ಮೂಲಕ ಜನರಿಗೆ ತಲುಪಿ ಆದ ಬೆಳವಣಿಗೆಯ ಜೊತೆಗೆ ಪ್ಲಾನಿಸ್ಪಿಯರ್ ಅನ್ನು ಬಳಸುವ ವಿಧಾನವನ್ನು, ವಿದ್ಯಾರ್ಥಿಗಳ ಶ್ರಮದ ಕುರಿತು ಸಂಯೋಜಕರಾದ ಅತುಲ್ ಭಟ್ ಮಾಹಿತಿ ನೀಡಿದರು.

ಈ ಸಂದರ್ಭ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಘವೇಂದ್ರ ಎ., ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರತಿಭಾ ಸಿ. ಆಚಾರ್ಯ ಹಾಗೂ ಪಿಎಎಸಿ ವಿದ್ಯಾರ್ಥಿನಿ ಶುಭಶ್ರೀ ಶಣೈ ಉಪಸ್ಥಿತರಿದ್ದರು.

ಆಕಾಶದಲ್ಲಿ ನಕ್ಷತ್ರಗಳ ಚಲನೆಯನ್ನು ಗುರುತಿಸುವ ಹವ್ಯಾಸಿಗಳು ಅಥವಾ ಈ ಬಗ್ಗೆ ಮಾಹಿತಿ ಪಡೆಯ ಬೇಕು ಎನ್ನುವ ಆಸಕ್ತರು https://paac.ppc.ac.in/planisphere ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ಲಾನಿಸ್ಪಿಯರ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಇದರಲ್ಲಿ ನಿಮಗೆ ಮಾಹಿತಿಯು ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿ ಲಭ್ಯವಿದ್ದು ಅದನ್ನು ಪಿಎಎಸಿ ವೆಬ್‌ಸೈಟ್‌ನಿಂದ ಪಡೆಯಬಹುದಾಗಿದೆ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago