ಉಡುಪಿ: ಉಡುಪಿಯ ಅಂಬಾಗಿಲು ಕಲ್ಸಂಕ ರಸ್ತೆಯಲ್ಲಿರುವ ಧರಣಿ ಆರ್ಕೆಡ್ ವಾಣಿಜ್ಯ ಕಟ್ಟಡವನ್ನು ನಿಯಮಾವಳಿಗಳನ್ನು ಗಾಳಿಗೆ ತೂರಿ ನಿರ್ಮಿಸಿದ್ದಲ್ಲದೇ ಇದೀಗ ಈ ವಿವಾದಿತ ಕಟ್ಟಡಕ್ಕೆ ಟ್ರೇಡ್ ಲೈಸನ್ಸನ್ನೂ ನೀಡುವ ಮೂಲಕ ನಗರಸಭೆ ಅಧಿಕಾರಿಗಳು ಭ್ರಷ್ಟಾಚಾರ ಎಸಗಿದ್ದಾರೆ ಎಂದು ದೂರುದಾರ ಮಹಮ್ಮದ್ ಹನೀಫ್ ಹೇಳಿದ್ದಾರೆ.
ಈ ಸಂಬಂಧ ಇಂದು ಸುದ್ದಿಗೋಷ್ಟಿ ನಡೆಸಿದ ಮಹಮ್ಮದ್ ಹನೀಫ್ ಧರಣಿ ಆರ್ಕೇಡ್ ಕಟ್ಟಡಕ್ಕೆ ಮೂರು ಮಹಡಿಯ ಅನುಮತಿ ಇಲ್ಲ.ಹೀಗಿದ್ದರೂ ಮೂರು ಮಹಡಿಯ ಕಟ್ಟಡ ನಿರ್ಮಿಸಲಾಗಿದೆ.ಈ ಸಂಬಂಧ ನಗರಸಭೆಗೆ ತಾನು ದೂರು ನೀಡಿದ್ದೆ.ಬಳಿಕ ನಗರಸಭೆಯವರು ಕಟ್ಟಡದ ಮಾಲಕರಿಗೆ ನೊಟೀಸು ನೀಡಿದ್ದರು.ಕಟ್ಟಡದ ಅಕ್ರಮ ಮಹಡಿಯನ್ನು ತೆರವುಗೊಳಿಸಲು ನಗರಭೆ ನೊಟೀಸು ನೀಡಿದ್ದರೂ ಮಾಲಕರು ನ್ಯಾಯಾಲಯಕ್ಕೆ ಹೋಗಿ ಸ್ಟೇ ತಂದಿದ್ದಾರೆ.
ವ್ಯಾಜ್ಯ ಕೋರ್ಟ್ ನಲ್ಲಿದ್ದರೂ ನಗರಸಭೆಯವರು ಕಂಪ್ಲೀಷನ್ ಗೆ ಅನುಮತಿ ನೀಡಿ ಟ್ರೇಡ್ ಲೈಸನ್ ಅನ್ನೂ ನೀಡಿದ್ದಾರೆ.ಇದು ಅಕ್ರಮ.ತಕ್ಷಣ ಕಟ್ಟಡದ ಟ್ರೇಡ್ ಲೈಸನ್ಸ್ ರದ್ದು ಮಾಡಿ ,ಕಟ್ಟಡ ತೆರವು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ದೂರುದಾರ ಮಹಮ್ಮದ್ ಹನೀಫ್ ಒತ್ತಾಯಿಸಿದ್ದಾರೆ
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…