ಉಡುಪಿ : ನಗರದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಶಿವಮೊಗ್ಗ ನಿವಾಸಿಗಳಾದ ಫೈರೋಜ್ (20) ಮತ್ತು ಮೊಹ್ಮದ್ ಮೊಸೀನ್ (20) ಎಂದು ಗುರುತಿಸಲಾಗಿದೆ.
ಉಡುಪಿ ಜಿಲ್ಲಾ ಎಸ್ಪಿ ನಿಶಾ ಜೇಮ್ಸ್ ರವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರರವರ ಮಾರ್ಗದರ್ಶನದಲ್ಲಿ ಉಡುಪಿ ಉಪ ವಿಭಾಗದ ಡಿವೈಎಸ್ಪಿ ಟಿ.ಆರ್. ಜೈಶಂಕರ್ ಅವರು ಖಚಿತ ಮಾಹಿತಿ ಹಿನ್ನೆಲೆ ಡಿಸಿಐಬಿ ಸಿಬ್ಬಂದಿಯವರೊಂದಿಗೆ ಉಡುಪಿ ಪಂದುಬೆಟ್ಟು ಎಂಬಲ್ಲಿ ಈ ಕಾರ್ಯಾಚರಣೆ ನಡೆಸಿದ್ದಾರೆ.
ನವೆಂಬರ್ 7ರಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಶಾ ಜೇಮ್ಸ್ ರವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ ಚಂದ್ರರವರ ಮಾರ್ಗದರ್ಶನದಲ್ಲಿ, ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಟಿ.ಆರ್. ಜೈಶಂಕರ್ ರವರು ಖಚಿತ ಮಾಹಿತಿ ಮೇರೆಗೆ ಡಿಸಿಐಬಿ ಸಿಬ್ಬಂದಿಯವರೊಂದಿಗೆ ಉಡುಪಿ ಪಂದುಬೆಟ್ಟು ಎಂಬಲ್ಲಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ 1.450 ಕೆ.ಜಿ ಗಾಂಜಾ, 2 ಮೊಬೈಲ್ ಫೋನ್, ಗಾಂಜಾ ತೂಕ ಮಾಡುವ ಮಿಷನ್, ನಗದು ಹಣ, ಪೌಚ್ ಇತ್ಯಾದಿಗಳನ್ನು ಸ್ವಾಧೀನಪಡಿಸಿಕೊಂಡು ಉಡುಪಿ ನಗರ ಠಾಣೆಗೆ ಹಸ್ತಾಂತರಿಸಿದ್ದು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಸ್ವಾಧೀನಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ 33,000/- ರೂಪಾಯಿ ಆಗಬಹುದು.
ಈ ಕಾರ್ಯಾಚರಣೆಯಲ್ಲಿ ಡಿ.ವೈ.ಎಸ್.ಪಿ., ಉಡುಪಿರವರಿಗೆ ಡಿ.ಸಿ.ಐ.ಬಿ ಘಟಕದ ಎಎಸ್ಐ ರವಿಚಂದ್ರ ಹಾಗೂ ಸಿಬ್ಬಂದಿಯವರಾದ ಸುರೇಶ, ಸಂತೋಷ ಕುಂದರ್, ಚಂದ್ರ ಶೆಟ್ಟಿ, ರಾಮು ಹೆಗ್ಡೆ, ರಾಘವೇಂದ್ರ ಉಪ್ಪುಂದ, ರಾಜ್ ಕುಮಾರ್, ದಯಾನಂದ ಪ್ರಭು, ಶಿವಾನಂದ ಪೂಜಾರಿ ಹಾಗೂ ಚಾಲಕ ಶಾಂತಾರಾಮ ರವರು ಸಹಕರಿಸಿರುತ್ತಾರೆ.
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…
ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…
ಡಿವೈಡರ್ಗೆ ಕಾರು ಡಿಕ್ಕಿ : ಭೀಕರ ಅಪಘಾತದಲ್ಲಿ ಖ್ಯಾತ ನಟಿ ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…