Featured

ಉಡುಪಿ : ನಗರದಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ಪೊಲೀಸ್ ವಶಕ್ಕೆ -Vishwanews24

ಉಡುಪಿ : ನಗರದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಶಿವಮೊಗ್ಗ ನಿವಾಸಿಗಳಾದ ಫೈರೋಜ್ (20) ಮತ್ತು ಮೊಹ್ಮದ್ ಮೊಸೀನ್ (20) ಎಂದು ಗುರುತಿಸಲಾಗಿದೆ.

ಉಡುಪಿ ಜಿಲ್ಲಾ ಎಸ್ಪಿ ನಿಶಾ ಜೇಮ್ಸ್ ರವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರರವರ ಮಾರ್ಗದರ್ಶನದಲ್ಲಿ ಉಡುಪಿ ಉಪ ವಿಭಾಗದ ಡಿವೈಎಸ್ಪಿ ಟಿ.ಆರ್. ಜೈಶಂಕರ್ ಅವರು ಖಚಿತ ಮಾಹಿತಿ ಹಿನ್ನೆಲೆ ಡಿಸಿಐಬಿ ಸಿಬ್ಬಂದಿಯವರೊಂದಿಗೆ ಉಡುಪಿ ಪಂದುಬೆಟ್ಟು ಎಂಬಲ್ಲಿ ಈ ಕಾರ್ಯಾಚರಣೆ ನಡೆಸಿದ್ದಾರೆ.

ನವೆಂಬರ್ 7ರಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಶಾ ಜೇಮ್ಸ್ ರವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ ಚಂದ್ರರವರ ಮಾರ್ಗದರ್ಶನದಲ್ಲಿ, ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಟಿ.ಆರ್. ಜೈಶಂಕರ್ ರವರು ಖಚಿತ ಮಾಹಿತಿ ಮೇರೆಗೆ ಡಿಸಿಐಬಿ ಸಿಬ್ಬಂದಿಯವರೊಂದಿಗೆ ಉಡುಪಿ ಪಂದುಬೆಟ್ಟು ಎಂಬಲ್ಲಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ 1.450 ಕೆ.ಜಿ ಗಾಂಜಾ, 2 ಮೊಬೈಲ್ ಫೋನ್, ಗಾಂಜಾ ತೂಕ ಮಾಡುವ ಮಿಷನ್, ನಗದು ಹಣ, ಪೌಚ್ ಇತ್ಯಾದಿಗಳನ್ನು ಸ್ವಾಧೀನಪಡಿಸಿಕೊಂಡು ಉಡುಪಿ ನಗರ ಠಾಣೆಗೆ ಹಸ್ತಾಂತರಿಸಿದ್ದು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಸ್ವಾಧೀನಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ 33,000/- ರೂಪಾಯಿ ಆಗಬಹುದು.

ಈ ಕಾರ್ಯಾಚರಣೆಯಲ್ಲಿ ಡಿ.ವೈ.ಎಸ್.ಪಿ., ಉಡುಪಿರವರಿಗೆ ಡಿ.ಸಿ.ಐ.ಬಿ ಘಟಕದ ಎಎಸ್ಐ ರವಿಚಂದ್ರ ಹಾಗೂ ಸಿಬ್ಬಂದಿಯವರಾದ ಸುರೇಶ, ಸಂತೋಷ ಕುಂದರ್, ಚಂದ್ರ ಶೆಟ್ಟಿ, ರಾಮು ಹೆಗ್ಡೆ, ರಾಘವೇಂದ್ರ ಉಪ್ಪುಂದ, ರಾಜ್ ಕುಮಾರ್, ದಯಾನಂದ ಪ್ರಭು, ಶಿವಾನಂದ ಪೂಜಾರಿ ಹಾಗೂ ಚಾಲಕ ಶಾಂತಾರಾಮ ರವರು ಸಹಕರಿಸಿರುತ್ತಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

5 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

5 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

5 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

6 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

6 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

8 hours ago