Featured

ಉಡುಪಿ : ನಗರದಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ಪೊಲೀಸ್ ವಶಕ್ಕೆ -Vishwanews24

ಉಡುಪಿ : ನಗರದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಶಿವಮೊಗ್ಗ ನಿವಾಸಿಗಳಾದ ಫೈರೋಜ್ (20) ಮತ್ತು ಮೊಹ್ಮದ್ ಮೊಸೀನ್ (20) ಎಂದು ಗುರುತಿಸಲಾಗಿದೆ.

ಉಡುಪಿ ಜಿಲ್ಲಾ ಎಸ್ಪಿ ನಿಶಾ ಜೇಮ್ಸ್ ರವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರರವರ ಮಾರ್ಗದರ್ಶನದಲ್ಲಿ ಉಡುಪಿ ಉಪ ವಿಭಾಗದ ಡಿವೈಎಸ್ಪಿ ಟಿ.ಆರ್. ಜೈಶಂಕರ್ ಅವರು ಖಚಿತ ಮಾಹಿತಿ ಹಿನ್ನೆಲೆ ಡಿಸಿಐಬಿ ಸಿಬ್ಬಂದಿಯವರೊಂದಿಗೆ ಉಡುಪಿ ಪಂದುಬೆಟ್ಟು ಎಂಬಲ್ಲಿ ಈ ಕಾರ್ಯಾಚರಣೆ ನಡೆಸಿದ್ದಾರೆ.

ನವೆಂಬರ್ 7ರಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಶಾ ಜೇಮ್ಸ್ ರವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ ಚಂದ್ರರವರ ಮಾರ್ಗದರ್ಶನದಲ್ಲಿ, ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಟಿ.ಆರ್. ಜೈಶಂಕರ್ ರವರು ಖಚಿತ ಮಾಹಿತಿ ಮೇರೆಗೆ ಡಿಸಿಐಬಿ ಸಿಬ್ಬಂದಿಯವರೊಂದಿಗೆ ಉಡುಪಿ ಪಂದುಬೆಟ್ಟು ಎಂಬಲ್ಲಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ 1.450 ಕೆ.ಜಿ ಗಾಂಜಾ, 2 ಮೊಬೈಲ್ ಫೋನ್, ಗಾಂಜಾ ತೂಕ ಮಾಡುವ ಮಿಷನ್, ನಗದು ಹಣ, ಪೌಚ್ ಇತ್ಯಾದಿಗಳನ್ನು ಸ್ವಾಧೀನಪಡಿಸಿಕೊಂಡು ಉಡುಪಿ ನಗರ ಠಾಣೆಗೆ ಹಸ್ತಾಂತರಿಸಿದ್ದು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಸ್ವಾಧೀನಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ 33,000/- ರೂಪಾಯಿ ಆಗಬಹುದು.

ಈ ಕಾರ್ಯಾಚರಣೆಯಲ್ಲಿ ಡಿ.ವೈ.ಎಸ್.ಪಿ., ಉಡುಪಿರವರಿಗೆ ಡಿ.ಸಿ.ಐ.ಬಿ ಘಟಕದ ಎಎಸ್ಐ ರವಿಚಂದ್ರ ಹಾಗೂ ಸಿಬ್ಬಂದಿಯವರಾದ ಸುರೇಶ, ಸಂತೋಷ ಕುಂದರ್, ಚಂದ್ರ ಶೆಟ್ಟಿ, ರಾಮು ಹೆಗ್ಡೆ, ರಾಘವೇಂದ್ರ ಉಪ್ಪುಂದ, ರಾಜ್ ಕುಮಾರ್, ದಯಾನಂದ ಪ್ರಭು, ಶಿವಾನಂದ ಪೂಜಾರಿ ಹಾಗೂ ಚಾಲಕ ಶಾಂತಾರಾಮ ರವರು ಸಹಕರಿಸಿರುತ್ತಾರೆ.

Vishwa News 24

Recent Posts

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

15 minutes ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

25 minutes ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

36 minutes ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

2 hours ago

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು – ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…

2 hours ago

ಡಿವೈಡರ್‌ಗೆ ಕಾರು ಡಿಕ್ಕಿ : ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು – vishwanews24

ಡಿವೈಡರ್‌ಗೆ ಕಾರು ಡಿಕ್ಕಿ :  ಭೀಕರ ಅಪಘಾತದಲ್ಲಿ ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…

3 hours ago