Featured

ಉಡುಪಿ ನಗರದ 15 ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಕ್ರಮ: ಎಸ್ಪಿ ಡಾ.ಅರುಣ್ – vishwanews24

ಉಡುಪಿ ನಗರದ 15 ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಕ್ರಮ: ಎಸ್ಪಿ ಡಾ.ಅರುಣ್

ಉಡುಪಿ: ಅಪರಾಧಗಳ ಬಗ್ಗೆ ಮಾಹಿತಿ ಕಳೆಹಾಕಲು ಅನುಕೂಲ ವಾಗುವ ನಿಟ್ಟಿನಲ್ಲಿ ಉಡುಪಿ ನಗರದ ಎಲ್ಲ ಆಯಾಕಟ್ಟಿನ 15 ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಈ ತಿಂಗಳ ಅಂತ್ಯ ದೊಳಗೆ ಸಂಬಂಧಪಟ್ಟವರಿಗೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.

ಇತರ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿಯು ಪ್ರಮುಖ ನಗರವಾಗಿ ಬೆಳೆಯುತ್ತಿದೆ. ಈ ಹಿಂದೆ ಉಡುಪಿ ನಗರಾದ್ಯಂತ ಒಟ್ಟು 90 ಸಿಸಿಟಿವಿಗಳನ್ನು ಆಳವಡಿಸಲಾಗಿತ್ತು. ಅದರಲ್ಲಿ ಕೆಲವು ಕ್ಯಾಮೆರಾ ಕಾರ್ಯನಿರ್ವಹಿಸುತ್ತಿಲ್ಲ. ಈಗ ಹೊಸದಾಗಿ ಉಡುಪಿ ನಗರದಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ಜಿಲ್ಲಾಡಳಿತ, ನಗರಸಭೆಗೆ ಪ್ರಸ್ತಾಪ ಕಳುಹಿಸಲಾಗುವುದು. ಅದೇ ರೀತಿ ಜನಪ್ರತಿನಿಧಿಗಳ ಸಹಕಾರ ಮತ್ತು ಸಿಆರ್‌ಎಸ್ ಅನುದಾನದಲ್ಲಿಯೂ ಕ್ಯಾಮೆರಾ ಅಳವಡಿಸಲು ಉದ್ದೇಶಿಸಲಾಗಿದೆ ಎಂದರು.

ನಗರದ ಪ್ರವೇಶ ಮತ್ತು ನಿರ್ಗಮನ ಪ್ರದೇಶ ಸೇರಿದಂತೆ ಆಯಾಕಟ್ಟಿನ ಸ್ಥಳಗಳಲ್ಲಿ ಯಾರು ಬರುತ್ತಾರೆ ಮತ್ತು ಹೋಗು ತ್ತಾರೆ ಎಂಬ ಮಾಹಿತಿ ತಿಳಿಯಲು ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಈಗಲೇ ಯಾವ ಪ್ರದೇಶದಲ್ಲಿ ಖಾಸಗಿ ಯವರು ಸಿಸಿಟಿವಿಗಳನ್ನು ಅಳವಡಿಸಿದ್ದಾರೆ ಎಂಬುದು ಆ್ಯಪ್ ಮೂಲಕ ಕಂಡುಕೊಳ್ಳಬಹುದು. ಸಿಸಿ ಕ್ಯಾಮೆರಾ ಇಲ್ಲದ ಕಡೆಗಳಿಗೆ ಮಾತ್ರ ಕ್ಯಾಮೆರಾ ಅಳವಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಒಟ್ಟು 15 ಜಂಕ್ಷನ್‌ಗಳಲ್ಲಿ ಒಂದೊಂದರಲ್ಲಿ 3-4 ಕ್ಯಾಮೆರಾಗಳನ್ನು ಅಳವಡಿಸ ಲಾಗುವುದು. ಮೊದಲು ಪ್ರಥಮ ಆದ್ಯತೆ ಉಡುಪಿ ನಗರಕ್ಕೆ ಸಿಟಿ ಕ್ಯಾಮೆರಾ ಗಳನ್ನು ಅಳವಡಿಸಿ, ಮುಂದೆ ಎಲ್ಲ ತಾಲೂಕು ಕೇಂದ್ರಗಳಲ್ಲೂ ಅಳವಡಿಸ ಲಾಗುವುದು. ಇದಕ್ಕೆ ಬೇಕಾದ ಪ್ರಸ್ತಾವನೆಯನ್ನು ಸಿದ್ಧಪಡಿಸುತ್ತೇವೆ ಎಂದು ಎಸ್ಪಿ ತಿಳಿಸಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago