Featured

ಉಡುಪಿ : ನಗರಸಭೆ ಅನುಮತಿ ಇಲ್ಲದೆ ಭುಜಂಗ ಪಾರ್ಕ್‌ನಲ್ಲಿ ನಾಲ್ಕೈದು ಮರ ಕಡಿದ ಗುತ್ತೀಗೆದಾರ ; 25ಸಾವಿರ ರೂ. ದಂಡ ವಿಧಿಸಿದ ಪೌರಾಯುಕ್ತ – vishwanews24

ಉಡುಪಿ : ನಗರಸಭೆ ಅನುಮತಿ ಇಲ್ಲದೆ ಭುಜಂಗ ಪಾರ್ಕ್‌ನಲ್ಲಿ ನಾಲ್ಕೈದು ಮರ ಕಡಿದ ಗುತ್ತೀಗೆದಾರ ..

25000 ರೂ. ದಂಡ ವಿಧಿಸಿದ ಪೌರಾಯುಕ್ತ

ಉಡುಪಿ: ಉಡುಪಿ ನಗರಸಭೆ ಅನುಮತಿ ಇಲ್ಲದೆಯೇ ನಗರದ ಭುಜಂಗ ಪಾರ್ಕ್‌ ನಲ್ಲಿದ್ದ ನಾಲ್ಕೈದು ಮರಗಳನ್ನು ಕಡಿದು ಹಾಕಿದ ಗುತ್ತಿಗೆದಾರನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತರು ಗುತ್ತಿಗೆದಾರನನ್ನು ತರಾಟೆಗೆ ತೆಗೆದುಕೊಂಡು 25ಸಾವಿರ ರೂ. ದಂಡ ವಿಧಿಸಿದ್ದಾರೆ.

ಪಾರ್ಕ್ ನಲ್ಲಿ ಬೆಳೆದು ನಿಂತ ಮರಗಳನ್ನು ಅಪಾಯಕಾರಿ ಎಂಬ ನೆಲೆಯಲ್ಲಿ ಪಾರ್ಕ್ ನಿರ್ವಹಣೆ ಮಾಡುತ್ತಿರುವ ಗುತ್ತಿಗೆದಾರ ಸುರೇಶ್ ಎಂಬವರ ಸೂಚನೆಯಂತೆ ಕಾರ್ಮಿಕರು ಕಡಿಯುತ್ತಿದ್ದರು. ಇದಕ್ಕೆ ಪಾರ್ಕ್ ನಲ್ಲಿ ವಿಹರಿಸುವ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೂ ಕಾರ್ಮಿಕರು ನಾಲ್ಕೈದು ಮರಗಳನ್ನು ಕಡಿದು ಧರೆಗೆ ಉರುಳಿಸಿದರು. ಮತ್ತೂ ಉಳಿದ ಮರಗಳನ್ನು ಕಡಿಯಲು ಸಿದ್ಧತೆ ಮಾಡುತ್ತಿದ್ದಾಗ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತ ರಾಯಪ್ಪ ಮರ ಕಡಿಯುವುದನ್ನು ತಡೆದರು.

ಈ ವೇಳೆ ಗುತ್ತಿಗೆದಾರರನನ್ನು ಸ್ಥಳಕ್ಕೆ ಕರೆಸಿ, ಯಾವುದೇ ಅನುಮತಿ ಇಲ್ಲದೇ ಮರ ಕಡಿದಿರುವುದಕ್ಕೆ ತೀವ್ರ ತರಾಟೆಗೆ ತೆಗೆದುಕೊಂಡರು. ಈ ತಪ್ಪಿಗೆ 25 ಸಾವಿರ ರೂ. ದಂಡ ಪಾವತಿಸುವಂತೆ ಮತ್ತು ಒಂದು ಮರದ ಬದಲು 10 ಗಿಡಗಳನ್ನು ನೆಡುವಂತೆ ಗುತ್ತಿಗೆದಾರನಿಗೆ ಪೌರಾಯುಕ್ತರು ಸೂಚಿಸಿದರು.

ಈ ಸಂದರ್ಭದಲ್ಲಿ ಪರಿಸರ ಇಂಜಿನಿಯರ್ ಸ್ನೇಹಾ ಕೆ.ಎಸ್. ಹಾಜರಿದ್ದರು. ಮಾಹಿತಿ ತಿಳಿದು ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

37 minutes ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

48 minutes ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

53 minutes ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

1 hour ago

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

18 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

19 hours ago