ಉಡುಪಿ: ಉಡುಪಿ ನಗರಸಭೆ ಅನುಮತಿ ಇಲ್ಲದೆಯೇ ನಗರದ ಭುಜಂಗ ಪಾರ್ಕ್ ನಲ್ಲಿದ್ದ ನಾಲ್ಕೈದು ಮರಗಳನ್ನು ಕಡಿದು ಹಾಕಿದ ಗುತ್ತಿಗೆದಾರನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತರು ಗುತ್ತಿಗೆದಾರನನ್ನು ತರಾಟೆಗೆ ತೆಗೆದುಕೊಂಡು 25ಸಾವಿರ ರೂ. ದಂಡ ವಿಧಿಸಿದ್ದಾರೆ.
ಪಾರ್ಕ್ ನಲ್ಲಿ ಬೆಳೆದು ನಿಂತ ಮರಗಳನ್ನು ಅಪಾಯಕಾರಿ ಎಂಬ ನೆಲೆಯಲ್ಲಿ ಪಾರ್ಕ್ ನಿರ್ವಹಣೆ ಮಾಡುತ್ತಿರುವ ಗುತ್ತಿಗೆದಾರ ಸುರೇಶ್ ಎಂಬವರ ಸೂಚನೆಯಂತೆ ಕಾರ್ಮಿಕರು ಕಡಿಯುತ್ತಿದ್ದರು. ಇದಕ್ಕೆ ಪಾರ್ಕ್ ನಲ್ಲಿ ವಿಹರಿಸುವ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೂ ಕಾರ್ಮಿಕರು ನಾಲ್ಕೈದು ಮರಗಳನ್ನು ಕಡಿದು ಧರೆಗೆ ಉರುಳಿಸಿದರು. ಮತ್ತೂ ಉಳಿದ ಮರಗಳನ್ನು ಕಡಿಯಲು ಸಿದ್ಧತೆ ಮಾಡುತ್ತಿದ್ದಾಗ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತ ರಾಯಪ್ಪ ಮರ ಕಡಿಯುವುದನ್ನು ತಡೆದರು.
ಈ ವೇಳೆ ಗುತ್ತಿಗೆದಾರರನನ್ನು ಸ್ಥಳಕ್ಕೆ ಕರೆಸಿ, ಯಾವುದೇ ಅನುಮತಿ ಇಲ್ಲದೇ ಮರ ಕಡಿದಿರುವುದಕ್ಕೆ ತೀವ್ರ ತರಾಟೆಗೆ ತೆಗೆದುಕೊಂಡರು. ಈ ತಪ್ಪಿಗೆ 25 ಸಾವಿರ ರೂ. ದಂಡ ಪಾವತಿಸುವಂತೆ ಮತ್ತು ಒಂದು ಮರದ ಬದಲು 10 ಗಿಡಗಳನ್ನು ನೆಡುವಂತೆ ಗುತ್ತಿಗೆದಾರನಿಗೆ ಪೌರಾಯುಕ್ತರು ಸೂಚಿಸಿದರು.
ಈ ಸಂದರ್ಭದಲ್ಲಿ ಪರಿಸರ ಇಂಜಿನಿಯರ್ ಸ್ನೇಹಾ ಕೆ.ಎಸ್. ಹಾಜರಿದ್ದರು. ಮಾಹಿತಿ ತಿಳಿದು ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…