ಉಡುಪಿ: ಉಡುಪಿ ನಗರಸಭೆ ಅನುಮತಿ ಇಲ್ಲದೆಯೇ ನಗರದ ಭುಜಂಗ ಪಾರ್ಕ್ ನಲ್ಲಿದ್ದ ನಾಲ್ಕೈದು ಮರಗಳನ್ನು ಕಡಿದು ಹಾಕಿದ ಗುತ್ತಿಗೆದಾರನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತರು ಗುತ್ತಿಗೆದಾರನನ್ನು ತರಾಟೆಗೆ ತೆಗೆದುಕೊಂಡು 25ಸಾವಿರ ರೂ. ದಂಡ ವಿಧಿಸಿದ್ದಾರೆ.
ಪಾರ್ಕ್ ನಲ್ಲಿ ಬೆಳೆದು ನಿಂತ ಮರಗಳನ್ನು ಅಪಾಯಕಾರಿ ಎಂಬ ನೆಲೆಯಲ್ಲಿ ಪಾರ್ಕ್ ನಿರ್ವಹಣೆ ಮಾಡುತ್ತಿರುವ ಗುತ್ತಿಗೆದಾರ ಸುರೇಶ್ ಎಂಬವರ ಸೂಚನೆಯಂತೆ ಕಾರ್ಮಿಕರು ಕಡಿಯುತ್ತಿದ್ದರು. ಇದಕ್ಕೆ ಪಾರ್ಕ್ ನಲ್ಲಿ ವಿಹರಿಸುವ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೂ ಕಾರ್ಮಿಕರು ನಾಲ್ಕೈದು ಮರಗಳನ್ನು ಕಡಿದು ಧರೆಗೆ ಉರುಳಿಸಿದರು. ಮತ್ತೂ ಉಳಿದ ಮರಗಳನ್ನು ಕಡಿಯಲು ಸಿದ್ಧತೆ ಮಾಡುತ್ತಿದ್ದಾಗ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತ ರಾಯಪ್ಪ ಮರ ಕಡಿಯುವುದನ್ನು ತಡೆದರು.
ಈ ವೇಳೆ ಗುತ್ತಿಗೆದಾರರನನ್ನು ಸ್ಥಳಕ್ಕೆ ಕರೆಸಿ, ಯಾವುದೇ ಅನುಮತಿ ಇಲ್ಲದೇ ಮರ ಕಡಿದಿರುವುದಕ್ಕೆ ತೀವ್ರ ತರಾಟೆಗೆ ತೆಗೆದುಕೊಂಡರು. ಈ ತಪ್ಪಿಗೆ 25 ಸಾವಿರ ರೂ. ದಂಡ ಪಾವತಿಸುವಂತೆ ಮತ್ತು ಒಂದು ಮರದ ಬದಲು 10 ಗಿಡಗಳನ್ನು ನೆಡುವಂತೆ ಗುತ್ತಿಗೆದಾರನಿಗೆ ಪೌರಾಯುಕ್ತರು ಸೂಚಿಸಿದರು.
ಈ ಸಂದರ್ಭದಲ್ಲಿ ಪರಿಸರ ಇಂಜಿನಿಯರ್ ಸ್ನೇಹಾ ಕೆ.ಎಸ್. ಹಾಜರಿದ್ದರು. ಮಾಹಿತಿ ತಿಳಿದು ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…