Featured

ಉಡುಪಿ ನಗರಸಭೆ ಮಾದರಿಯಲ್ಲಿ ಕಾಪು ಪುರಸಭೆ ಅಭಿವೃದ್ಧಿಗೆ ಬಿಜೆಪಿ ಸಂಕಲ್ಪ : ಯಶ್ ಪಾಲ್ ಸುವರ್ಣ – Vishwanews24

ಉಡುಪಿ ನಗರಸಭೆ ಮಾದರಿಯಲ್ಲಿ ಕಾಪು ಪುರಸಭೆ ಅಭಿವೃದ್ಧಿಗೆ ಬಿಜೆಪಿ ಸಂಕಲ್ಪ : ಯಶ್ ಪಾಲ್ ಸುವರ್ಣ – Vishwanews24

ರಾಜ್ಯದಲ್ಲಿಯೇ ಅತ್ಯುತ್ತಮ ನಗರಸಭೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಉಡುಪಿ ನಗರಸಭೆಯನ್ನು ಮಾದರಿಯಾಗಿ ಕಾಪು ಪುರಸಭೆಯ ಸರ್ವಾಂಗೀಣ ಅಭಿವೃದ್ದಿಗೆ ಕಾರ್ಯಯೋಜನೆ ರೂಪಿಸುವ ಸಂಕಲ್ಪದೊಂದಿಗೆ ಬಿಜೆಪಿ ಚುನಾವಣೆಯಲ್ಲಿ ಈ ಬಾರಿ ಪ್ರಚಂಡ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಉಡುಪಿ ನಗರಸಭೆ ಉಡುಪಿಯ ನವ ನಿರ್ಮಾಣದ ರೂವಾರಿಗಳಾದ ಕೀರ್ತಿಶೇಷ ಡಾ ವಿ ಎಸ್ ಆಚಾರ್ಯ ರವರ ಮಾರ್ಗದರ್ಶನದಲ್ಲಿ ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರ ನೇತೃತ್ವದಲ್ಲಿ ಕುಡಿಯುವ ನೀರು, ದಾರಿ ದೀಪ ವ್ಯವಸ್ಥೆ, ತ್ಯಾಜ್ಯ ವಿಲೇವಾರಿ ಘಟಕ, ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಮಲ್ಪೆ ಬೀಚ್ ನಿರ್ವಹಣೆ, ಕ್ರೀಡಾಂಗಣ, ಮೀನುಗಾರಿಕೆ ಬಂದರು ಸಹಿತ ಸರ್ವಾಂಗೀಣ ಅಭಿವೃದ್ಧಿಯ ರೂಪುರೇಷೆಯೊಂದಿಗೆ ಜನಪರ ಆಡಳಿತ ನಡೆಸುತ್ತಿರುವಂತೆ ಇದೇ ಮಾದರಿಯಲ್ಲಿ ಕಾಪು ಪುರಸಭೆಯಲ್ಲೂ ಸ್ವಚ್ಛ, ಪಾರದರ್ಶಕ ಆಡಳಿತದ ಮೂಲಕ ಬಿಜೆಪಿ ನವ ಕಾಪು ನಿರ್ಮಾಣದ ಕನಸು ನನಸಾಗಿಸಲಿದೆ.

ಪುರಸಭೆ ವ್ಯಾಪ್ತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ದರ್ಜೆ, ಅಗ್ನಿಶಾಮಕ ದಳ ಘಟಕ ಸ್ಥಾಪನೆ, ವೈಜ್ಞಾನಿಕ ಒಳಚರಂಡಿ ವ್ಯವಸ್ಥೆ, ನಾಡದೋಣಿ ಮೀನುಗಾರಿಕೆ ಜೆಟ್ಟಿ ಸ್ಥಾಪನೆ, ಮೀನು ಮಾರ್ಕೆಟ್ ಸಹಿತ ಆಧುನಿಕ ಮಾರುಕಟ್ಟೆ ಪ್ರಾಂಗಾಣ, ಕಾಪು ಬೀಚ್ ಅಭಿವೃದ್ಧಿ ಸಹಿತ ಶೈಕ್ಷಣಿಕ, ಅರೋಗ್ಯ, ತ್ಯಾಜ್ಯ ವಿಲೇವಾರಿ ಮುಂತಾದ ಕಾಪು ನಾಗರೀಕರ ಬಹುದಿನಗಳ ಬೇಡಿಕೆಗೆ ದೂರದೃಷ್ಟಿ ಯೋಜನೆಗಳ ಮೂಲಕ ಜನಪರ ಆಡಳಿತದೊಂದಿಗೆ ಶಾಸಕರು, ಸಂಸದರು ಹಾಗೂ ಜನಪ್ರತಿನಿಧಿಗಳ ಸಹಕಾರ ದೊಂದಿಗೆ ರಾಜ್ಯ ಹಾಗೂ ಕೇಂದ್ರ ಸರಕಾರದ ಜನಪರ ಯೋಜನೆಯನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ಬಿಜೆಪಿ ಆದ್ಯತೆ ನೀಡಲಿದೆ.

ಈ ಬಾರಿ ಕಾಪು ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡುಗಳಲ್ಲಿ ಮತದಾರರ ಭಾವನೆ ಬಿಜೆಪಿ ಪರವಾಗಿದ್ದು, ಈ ಬಾರಿ ಕಾಪು ಪುರಸಭೆಯಲ್ಲಿ ಅಧಿಕಾರದ ಚುಕ್ಕಾಣಿಹಿಡಿಯುವ ವಿಶ್ವಾಸ ಹೊಂದಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

3 hours ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

6 hours ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

6 hours ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

8 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

8 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

11 hours ago