Featured

ಉಡುಪಿ ನಗರಸಭೆ ಮಾದರಿಯಲ್ಲಿ ಕಾಪು ಪುರಸಭೆ ಅಭಿವೃದ್ಧಿಗೆ ಬಿಜೆಪಿ ಸಂಕಲ್ಪ : ಯಶ್ ಪಾಲ್ ಸುವರ್ಣ – Vishwanews24

ಉಡುಪಿ ನಗರಸಭೆ ಮಾದರಿಯಲ್ಲಿ ಕಾಪು ಪುರಸಭೆ ಅಭಿವೃದ್ಧಿಗೆ ಬಿಜೆಪಿ ಸಂಕಲ್ಪ : ಯಶ್ ಪಾಲ್ ಸುವರ್ಣ – Vishwanews24

ರಾಜ್ಯದಲ್ಲಿಯೇ ಅತ್ಯುತ್ತಮ ನಗರಸಭೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಉಡುಪಿ ನಗರಸಭೆಯನ್ನು ಮಾದರಿಯಾಗಿ ಕಾಪು ಪುರಸಭೆಯ ಸರ್ವಾಂಗೀಣ ಅಭಿವೃದ್ದಿಗೆ ಕಾರ್ಯಯೋಜನೆ ರೂಪಿಸುವ ಸಂಕಲ್ಪದೊಂದಿಗೆ ಬಿಜೆಪಿ ಚುನಾವಣೆಯಲ್ಲಿ ಈ ಬಾರಿ ಪ್ರಚಂಡ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಉಡುಪಿ ನಗರಸಭೆ ಉಡುಪಿಯ ನವ ನಿರ್ಮಾಣದ ರೂವಾರಿಗಳಾದ ಕೀರ್ತಿಶೇಷ ಡಾ ವಿ ಎಸ್ ಆಚಾರ್ಯ ರವರ ಮಾರ್ಗದರ್ಶನದಲ್ಲಿ ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರ ನೇತೃತ್ವದಲ್ಲಿ ಕುಡಿಯುವ ನೀರು, ದಾರಿ ದೀಪ ವ್ಯವಸ್ಥೆ, ತ್ಯಾಜ್ಯ ವಿಲೇವಾರಿ ಘಟಕ, ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಮಲ್ಪೆ ಬೀಚ್ ನಿರ್ವಹಣೆ, ಕ್ರೀಡಾಂಗಣ, ಮೀನುಗಾರಿಕೆ ಬಂದರು ಸಹಿತ ಸರ್ವಾಂಗೀಣ ಅಭಿವೃದ್ಧಿಯ ರೂಪುರೇಷೆಯೊಂದಿಗೆ ಜನಪರ ಆಡಳಿತ ನಡೆಸುತ್ತಿರುವಂತೆ ಇದೇ ಮಾದರಿಯಲ್ಲಿ ಕಾಪು ಪುರಸಭೆಯಲ್ಲೂ ಸ್ವಚ್ಛ, ಪಾರದರ್ಶಕ ಆಡಳಿತದ ಮೂಲಕ ಬಿಜೆಪಿ ನವ ಕಾಪು ನಿರ್ಮಾಣದ ಕನಸು ನನಸಾಗಿಸಲಿದೆ.

ಪುರಸಭೆ ವ್ಯಾಪ್ತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ದರ್ಜೆ, ಅಗ್ನಿಶಾಮಕ ದಳ ಘಟಕ ಸ್ಥಾಪನೆ, ವೈಜ್ಞಾನಿಕ ಒಳಚರಂಡಿ ವ್ಯವಸ್ಥೆ, ನಾಡದೋಣಿ ಮೀನುಗಾರಿಕೆ ಜೆಟ್ಟಿ ಸ್ಥಾಪನೆ, ಮೀನು ಮಾರ್ಕೆಟ್ ಸಹಿತ ಆಧುನಿಕ ಮಾರುಕಟ್ಟೆ ಪ್ರಾಂಗಾಣ, ಕಾಪು ಬೀಚ್ ಅಭಿವೃದ್ಧಿ ಸಹಿತ ಶೈಕ್ಷಣಿಕ, ಅರೋಗ್ಯ, ತ್ಯಾಜ್ಯ ವಿಲೇವಾರಿ ಮುಂತಾದ ಕಾಪು ನಾಗರೀಕರ ಬಹುದಿನಗಳ ಬೇಡಿಕೆಗೆ ದೂರದೃಷ್ಟಿ ಯೋಜನೆಗಳ ಮೂಲಕ ಜನಪರ ಆಡಳಿತದೊಂದಿಗೆ ಶಾಸಕರು, ಸಂಸದರು ಹಾಗೂ ಜನಪ್ರತಿನಿಧಿಗಳ ಸಹಕಾರ ದೊಂದಿಗೆ ರಾಜ್ಯ ಹಾಗೂ ಕೇಂದ್ರ ಸರಕಾರದ ಜನಪರ ಯೋಜನೆಯನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ಬಿಜೆಪಿ ಆದ್ಯತೆ ನೀಡಲಿದೆ.

ಈ ಬಾರಿ ಕಾಪು ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡುಗಳಲ್ಲಿ ಮತದಾರರ ಭಾವನೆ ಬಿಜೆಪಿ ಪರವಾಗಿದ್ದು, ಈ ಬಾರಿ ಕಾಪು ಪುರಸಭೆಯಲ್ಲಿ ಅಧಿಕಾರದ ಚುಕ್ಕಾಣಿಹಿಡಿಯುವ ವಿಶ್ವಾಸ ಹೊಂದಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

3 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

9 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

11 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

11 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

12 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

12 hours ago