Featured

ಉಡುಪಿ ನಗರಸಭೆ ಮಾದರಿಯಲ್ಲಿ ಕಾಪು ಪುರಸಭೆ ಅಭಿವೃದ್ಧಿಗೆ ಬಿಜೆಪಿ ಸಂಕಲ್ಪ : ಯಶ್ ಪಾಲ್ ಸುವರ್ಣ – Vishwanews24

ಉಡುಪಿ ನಗರಸಭೆ ಮಾದರಿಯಲ್ಲಿ ಕಾಪು ಪುರಸಭೆ ಅಭಿವೃದ್ಧಿಗೆ ಬಿಜೆಪಿ ಸಂಕಲ್ಪ : ಯಶ್ ಪಾಲ್ ಸುವರ್ಣ – Vishwanews24

ರಾಜ್ಯದಲ್ಲಿಯೇ ಅತ್ಯುತ್ತಮ ನಗರಸಭೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಉಡುಪಿ ನಗರಸಭೆಯನ್ನು ಮಾದರಿಯಾಗಿ ಕಾಪು ಪುರಸಭೆಯ ಸರ್ವಾಂಗೀಣ ಅಭಿವೃದ್ದಿಗೆ ಕಾರ್ಯಯೋಜನೆ ರೂಪಿಸುವ ಸಂಕಲ್ಪದೊಂದಿಗೆ ಬಿಜೆಪಿ ಚುನಾವಣೆಯಲ್ಲಿ ಈ ಬಾರಿ ಪ್ರಚಂಡ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಉಡುಪಿ ನಗರಸಭೆ ಉಡುಪಿಯ ನವ ನಿರ್ಮಾಣದ ರೂವಾರಿಗಳಾದ ಕೀರ್ತಿಶೇಷ ಡಾ ವಿ ಎಸ್ ಆಚಾರ್ಯ ರವರ ಮಾರ್ಗದರ್ಶನದಲ್ಲಿ ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರ ನೇತೃತ್ವದಲ್ಲಿ ಕುಡಿಯುವ ನೀರು, ದಾರಿ ದೀಪ ವ್ಯವಸ್ಥೆ, ತ್ಯಾಜ್ಯ ವಿಲೇವಾರಿ ಘಟಕ, ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಮಲ್ಪೆ ಬೀಚ್ ನಿರ್ವಹಣೆ, ಕ್ರೀಡಾಂಗಣ, ಮೀನುಗಾರಿಕೆ ಬಂದರು ಸಹಿತ ಸರ್ವಾಂಗೀಣ ಅಭಿವೃದ್ಧಿಯ ರೂಪುರೇಷೆಯೊಂದಿಗೆ ಜನಪರ ಆಡಳಿತ ನಡೆಸುತ್ತಿರುವಂತೆ ಇದೇ ಮಾದರಿಯಲ್ಲಿ ಕಾಪು ಪುರಸಭೆಯಲ್ಲೂ ಸ್ವಚ್ಛ, ಪಾರದರ್ಶಕ ಆಡಳಿತದ ಮೂಲಕ ಬಿಜೆಪಿ ನವ ಕಾಪು ನಿರ್ಮಾಣದ ಕನಸು ನನಸಾಗಿಸಲಿದೆ.

ಪುರಸಭೆ ವ್ಯಾಪ್ತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ದರ್ಜೆ, ಅಗ್ನಿಶಾಮಕ ದಳ ಘಟಕ ಸ್ಥಾಪನೆ, ವೈಜ್ಞಾನಿಕ ಒಳಚರಂಡಿ ವ್ಯವಸ್ಥೆ, ನಾಡದೋಣಿ ಮೀನುಗಾರಿಕೆ ಜೆಟ್ಟಿ ಸ್ಥಾಪನೆ, ಮೀನು ಮಾರ್ಕೆಟ್ ಸಹಿತ ಆಧುನಿಕ ಮಾರುಕಟ್ಟೆ ಪ್ರಾಂಗಾಣ, ಕಾಪು ಬೀಚ್ ಅಭಿವೃದ್ಧಿ ಸಹಿತ ಶೈಕ್ಷಣಿಕ, ಅರೋಗ್ಯ, ತ್ಯಾಜ್ಯ ವಿಲೇವಾರಿ ಮುಂತಾದ ಕಾಪು ನಾಗರೀಕರ ಬಹುದಿನಗಳ ಬೇಡಿಕೆಗೆ ದೂರದೃಷ್ಟಿ ಯೋಜನೆಗಳ ಮೂಲಕ ಜನಪರ ಆಡಳಿತದೊಂದಿಗೆ ಶಾಸಕರು, ಸಂಸದರು ಹಾಗೂ ಜನಪ್ರತಿನಿಧಿಗಳ ಸಹಕಾರ ದೊಂದಿಗೆ ರಾಜ್ಯ ಹಾಗೂ ಕೇಂದ್ರ ಸರಕಾರದ ಜನಪರ ಯೋಜನೆಯನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ಬಿಜೆಪಿ ಆದ್ಯತೆ ನೀಡಲಿದೆ.

ಈ ಬಾರಿ ಕಾಪು ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡುಗಳಲ್ಲಿ ಮತದಾರರ ಭಾವನೆ ಬಿಜೆಪಿ ಪರವಾಗಿದ್ದು, ಈ ಬಾರಿ ಕಾಪು ಪುರಸಭೆಯಲ್ಲಿ ಅಧಿಕಾರದ ಚುಕ್ಕಾಣಿಹಿಡಿಯುವ ವಿಶ್ವಾಸ ಹೊಂದಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

8 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago