ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ರಾಜೀನಾಮೆ ನೀಡುವ ಮುಖಾಂತರ ಹೊಸ ರಾಜಕೀಯ ಸಂಚಲನಕ್ಕೆ ನಾಂದಿ ಹಾಡಿದೆ. ಕಳೆದ 18 ತಿಂಗಳಿಂದ ಪ್ರಾಧಿಕಾರದಲ್ಲಿ ಅಧ್ಯಕ್ಷರಾಗಿದ್ದರು ಈ ಸಮಯದಲ್ಲಿ ಉತ್ತಮ ಹೆಸರು ಮತ್ತು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಯಶಸ್ವಿಯಾಗಿದ್ದರು ಆದರೆ ಇಂದು ದಿಢೀರ್ ಆಗಿ ಜಿಲ್ಲಾಧಿಕಾರಿಗಳಿಗೆ ಪತ್ರಮುಖೇನ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಈ ಬಗ್ಗೆ ಅವರು ತಮ್ಮ ಫೇಸ್ಬುಕ್ ಕತೆಯಲ್ಲಿ ಬರೆದುಕೊಂಡಿರುವ ಬಗ್ಗೆ ಹೀಗೆ “ಆತ್ಮೀಯರೇ ಭಾರತೀಯ ಜನತಾ ಪಕ್ಷದ ಆದೇಶದಂತೆ ಒಬ್ಬ ಅತ್ಯಂತ ಸಾಮಾನ್ಯ ಪಕ್ಷದ ಕಾರ್ಯಕರ್ತನಾಗಿ 18 ತಿಂಗಳು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಸಾಧ್ಯವಾದಷ್ಟು ಮಟ್ಟಿಗೆ ಹೊಸತನವನ್ನು ನೀಡಿ ಪಾರದರ್ಶಕತೆಯಿಂದ ಜನರಿಗೆ ಉಪಯೋಗವಾಗುವ ರೀತಿಯಲ್ಲಿ ನಮ್ಮ ಆಡಳಿತ ಕೆಲಸ ಮಾಡಿದೆ.ಇದೀಗ ಪಕ್ಷದ ಹಿರಿಯರ ಆದೇಶದಂತೆ ರಾಜೀನಾಮೆ ನೀಡಿದ್ದೇನೆ. ಸಹಕರಿಸಿದ ಉಡುಪಿ ಶಾಸಕರಾದ Mla K Raghupathi Bhat ಮತ್ತು ಕಾಪು ಶಾಸಕರಾದ @ ಲಾಲಾಜಿ ಮೆಂಡನ್ ಇವರಿಗೆ, ಪ್ರಾಧಿಕಾರದ ಗೌರವಾನ್ವಿತ ಸದಸ್ಯರುಗಳಿಗೆ,, ಸಿಬ್ಬಂದಿ ವರ್ಗ, ಜನತೆಯ ಸೇವೆ ಅವಕಾಶ ನೀಡಿದ ಪಕ್ಷದ ಹಿರಿಯರಿಗೆ ಮತ್ತು ಜನತೆಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…