ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ರಾಜೀನಾಮೆ ನೀಡುವ ಮುಖಾಂತರ ಹೊಸ ರಾಜಕೀಯ ಸಂಚಲನಕ್ಕೆ ನಾಂದಿ ಹಾಡಿದೆ. ಕಳೆದ 18 ತಿಂಗಳಿಂದ ಪ್ರಾಧಿಕಾರದಲ್ಲಿ ಅಧ್ಯಕ್ಷರಾಗಿದ್ದರು ಈ ಸಮಯದಲ್ಲಿ ಉತ್ತಮ ಹೆಸರು ಮತ್ತು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಯಶಸ್ವಿಯಾಗಿದ್ದರು ಆದರೆ ಇಂದು ದಿಢೀರ್ ಆಗಿ ಜಿಲ್ಲಾಧಿಕಾರಿಗಳಿಗೆ ಪತ್ರಮುಖೇನ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಈ ಬಗ್ಗೆ ಅವರು ತಮ್ಮ ಫೇಸ್ಬುಕ್ ಕತೆಯಲ್ಲಿ ಬರೆದುಕೊಂಡಿರುವ ಬಗ್ಗೆ ಹೀಗೆ “ಆತ್ಮೀಯರೇ ಭಾರತೀಯ ಜನತಾ ಪಕ್ಷದ ಆದೇಶದಂತೆ ಒಬ್ಬ ಅತ್ಯಂತ ಸಾಮಾನ್ಯ ಪಕ್ಷದ ಕಾರ್ಯಕರ್ತನಾಗಿ 18 ತಿಂಗಳು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಸಾಧ್ಯವಾದಷ್ಟು ಮಟ್ಟಿಗೆ ಹೊಸತನವನ್ನು ನೀಡಿ ಪಾರದರ್ಶಕತೆಯಿಂದ ಜನರಿಗೆ ಉಪಯೋಗವಾಗುವ ರೀತಿಯಲ್ಲಿ ನಮ್ಮ ಆಡಳಿತ ಕೆಲಸ ಮಾಡಿದೆ.ಇದೀಗ ಪಕ್ಷದ ಹಿರಿಯರ ಆದೇಶದಂತೆ ರಾಜೀನಾಮೆ ನೀಡಿದ್ದೇನೆ. ಸಹಕರಿಸಿದ ಉಡುಪಿ ಶಾಸಕರಾದ Mla K Raghupathi Bhat ಮತ್ತು ಕಾಪು ಶಾಸಕರಾದ @ ಲಾಲಾಜಿ ಮೆಂಡನ್ ಇವರಿಗೆ, ಪ್ರಾಧಿಕಾರದ ಗೌರವಾನ್ವಿತ ಸದಸ್ಯರುಗಳಿಗೆ,, ಸಿಬ್ಬಂದಿ ವರ್ಗ, ಜನತೆಯ ಸೇವೆ ಅವಕಾಶ ನೀಡಿದ ಪಕ್ಷದ ಹಿರಿಯರಿಗೆ ಮತ್ತು ಜನತೆಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…