ಮಂಗಳೂರು ಮನೆಯಲ್ಲಿ ಕೆ.ಜಿಗಟ್ಟಲೆ ಚಿನ್ನ,ಬೆಳ್ಳಿ ,ಲಕ್ಷಾಂತರ ಹಣ ಪತ್ತೆ.
ಮಂಗಳೂರು : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮೂವರು ಅಧಿಕಾರಿಗಳಾದ ಗುರುಪ್ರಸಾದ್ ,ನಯಿಮಾ ಸಯೀದ್, ಪ್ರಸಾದ್ ಸೇರಿ ವಾಣಿಜ್ಯ ಉದ್ದೇಶಕ್ಕೆ ಪರವಾನಿಗೆ ಕೊಡುವುದಕ್ಕಾಗಿ 2.5 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಎಸಿಬಿ ಅಧಿಕಾರಿಗಳು ನಗರಾಭಿವೃದ್ಧಿ ಕಛೇರಿ ಮೇಲೆ ದಾಳಿ ಮಾಡಿ ಮೂವರನ್ನು ಬಂಧಿಸಿದ್ದಾರೆ.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಎಂಜಿನಿಯರ್ ಗುರುಪ್ರಸಾದ್ ಅವರ ಮಂಗಳೂರು ನಗರದ ಕೊಟ್ಟಾರದ ಸಾಗರ್ ಪೊರ್ಟ್ ರೋಡ್ ಬಳಿ ಇರುವ ನಿವಾಸದ ಮೇಲೆ ದಾಳಿ ಮಾಡಲು ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ಮಂಗಳೂರು ವಿಭಾಗದ ಎಸಿಬಿ ಅಧಿಕಾರಿಗಳ ತಂಡ ಗುರುವಾರ ಸಂಜೆ ದಾಳಿ ಮಾಡಿದ್ದರು ತಡರಾತ್ರಿ 12 ಗಂಟೆವರೆಗೂ ಮನೆಯನ್ನು ಮೂಲೆ ಮೂಲೆ ಪರಿಶೀಲನೆ ನಡೆಸಿದ್ದು ಈ ವೇಳೆ 3.50 ಲಕ್ಷ ರೂಪಾಯಿ ಹಣ , 1 ಕೆ.ಜಿ 200 ಗ್ರಾಂ ಚಿನ್ನ, 5 ಕೆ.ಜಿ.ಬೆಳ್ಳಿ, ಒಂದು ಕಾರು ಪತ್ತೆಯಾಗಿದೆ.
ಮಂಗಳೂರು ಎಸಿಬಿ ಎಸ್ಪಿ ಸಿ.ಎ.ಸೈಮನ್ ,ಇನ್ಸ್ಪೆಕ್ಟರ್ ಶ್ಯಾಮ್ ಸುಂದರ್ ,ಹರಿಪ್ರಸಾದ್,ರಾಧಕೃಷ್ಣ.ಡಿ.ಎ,ರಾಧಕೃಷ್ಣ. ಕೆ,ವೈಶಾಲಿ ,ಆದರ್ಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…