ಉಡುಪಿ: ನಗರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಕೋವಿಡ್ ಲಸಿಕೆ ವಿತರಣೆ -Vishwanews24

Featured, ಉಡುಪಿ

ಉಡುಪಿ: ನಗರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಕೋವಿಡ್ ಲಸಿಕೆ ವಿತರಣೆ -Vishwanews24

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮದಿನದ ಪ್ರಯುಕ್ತ ಸೇವೆ ಮತ್ತು ಸಮರ್ಪಣೆ ಅಭಿಯಾನದ ಅಂಗವಾಗಿ ಬಿಜೆಪಿ ಉಡುಪಿ ನಗರ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರೇಬೆಟ್ಟು ಇವರ ಸಹಭಾಗಿತ್ವದಲ್ಲಿ “ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಕೋವಿಡ್ ಲಸಿಕೆ ವಿತರಣೆ” ನಡೆಯಿತು.

ಈಶ್ವರನಗರದ ವೈಷ್ಣವಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಶಾಸಕ ಕೆ ರಘುಪತಿ ಭಟ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್ ಉಪಸ್ಥಿತರಿದ್ದರು.

ಉಡುಪಿ: ಶ್ರೀ ಕ್ಷೇತ್ರ ಕೊಲ್ಲೂರು : ಈ ಬಾರಿ ಸರಳ ನವರಾತ್ರಿ ಉತ್ಸವ ಆಚರಣೆ -Vishwanews24