ಉಡುಪಿ: ಉಡುಪಿ ನಗರ ಭಾಗದಲ್ಲಿ ಸಾರ್ವಜನಿಕರ ಸೇವೆಗೆ ಹೆಚ್ಚುವರಿ ನರ್ಮ್ ಬಸ್ ಅಗತ್ಯವಿದ್ದು, ಕೊರೊನಾ ಸಂದರ್ಭದಲ್ಲಿ ಸೇವೆಯಿಂದ ಸ್ಥಗಿತಗೊಳಿಸಿರುವ 13 ರೂಟುಗಳ ಬಸ್ ಸೇವೆ ಪುನರಾರಂಭ ಮಾಡುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಬೆಳಗಾವಿ ಅಧಿವೇಶನದಲ್ಲಿ ಮನವಿ ಮಾಡಿದರು.
ಉಡುಪಿಯಲ್ಲಿ ಸುಮಾರು 9-10 ವರ್ಷಗಳ ಹಿಂದೆ ನರ್ಮ್ ಬಸ್ಗಳ ಓಡಾಟಕ್ಕೆ ಚಾಲನೆ ನೀಡಲಾಗಿದ್ದು ಪ್ರಾರಂಭದಲ್ಲಿ 45 ನರ್ಮ್ ಬಸ್ಗಳು 33 ಮಾರ್ಗಗಳಲ್ಲಿ ಕಾರ್ಯಾಚರಿಸುತ್ತಿದ್ದವು. ಕೊರೋನಾ ಸಂದರ್ಭದಲ್ಲಿ ಈ ಬಸ್ಸುಗಳ ಓಡಾಟ ವನ್ನು ಸಾಂಕ್ರಾಮಿಕ ರೋಗ ಪ್ರಸರಣ ತಡೆಯ ಕಾರಣಕ್ಕಾಗಿ ಮಾರ್ಗಸೂಚಿಯಂತೆ ನಿಲ್ಲಿಸಲಾಗಿತ್ತು. ಕೊರೋನಾ ಬಳಿಕ 13 ಬಸ್ಸುಗಳ ಓಡಾಟವನ್ನು ಖಾಯಂ ಆಗಿ ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ 20 ರೂಟ್ ಗಳಲ್ಲಿ 32 ಬಸ್ಸುಗಳು ಓಡಾಟ ನಡೆಸುತ್ತಿವೆ.
45 ಬಸ್ಸುಗಳ ಮಂಜೂರಾತಿಯು 10 ವರ್ಷಗಳ ಹಿಂದಿನ ಸಮೀಕ್ಷೆಯಂತೆ ಮಂಜೂರಾಗಿದ್ದು, ಈಗಿನ ಬೇಡಿಕೆಯಂತೆ ಸಾರ್ವಜನಿಕರ ಅನುಕೂಲಕ್ಕಾಗಿ ಕನಿಷ್ಠ 80 ನರ್ಮ್ ಬಸ್ಸುಗಳಿಗೆ ಹೆಚ್ಚಿಸಬೇಕಾದ ಅಗತ್ಯವಿದೆ. ಉಡುಪಿ ನಗರದಲ್ಲಿ ಕಾರ್ಯಾಚರಿಸುತ್ತಿರುವ 32 ನರ್ಮ್ ಬಸ್ಸುಗಳು ತೀರಾ ಹಳೆಯ ದಾಗಿದ್ದು, ಆಗಾಗ ಮಾರ್ಗ ಮಧ್ಯೆ ಕೆಟ್ಟು ನಿಲ್ಲುತ್ತಿರುವ ಘಟನೆಗಳು ಸಂಭವಿಸುತ್ತಿದೆ. ಬಸ್ಸುಗಳಿಗೆ ಚಾಲಕರು ಮತ್ತು ನಿರ್ವಾಹಕರ ಕೊರತೆಯೂ ಇದೆ. ಉಡುಪಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ, ಕಾರ್ಮಿಕ ವರ್ಗಕ್ಕೆ ಉತ್ತಮ ಸರಕಾರಿ ಬಸ್ ಸೇವೆ ನೀಡುವ ನಿಟ್ಟಿನಲ್ಲಿ ಹೆಚ್ಚುವರಿ ಬಸ್ ಮಂಜೂರು ಮಾಡಿ ಸಹಕರಿಸುವಂತೆ ಸಾರಿಗೆ ಸಚಿವರಿಗೆ ಮನವಿ ಮಾಡಿರುವುದಾಗಿ ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…