Featured

ಉಡುಪಿ:  ನಗರ ಭಾಗದಲ್ಲಿ ಸಾರ್ವಜನಿಕರ ಸೇವೆಗೆ  ಹೆಚ್ಚುವರಿ ಸರಕಾರಿ ನರ್ಮ್ ಬಸ್ ಮಂಜೂರು ಮಾಡುವಂತೆ ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ:  ನಗರ ಭಾಗದಲ್ಲಿ ಸಾರ್ವಜನಿಕರ ಸೇವೆಗೆ  ಹೆಚ್ಚುವರಿ ಸರಕಾರಿ ನರ್ಮ್ ಬಸ್ ಮಂಜೂರು ಮಾಡುವಂತೆ ಶಾಸಕ ಯಶ್ ಪಾಲ್ ಮನವಿ

ಉಡುಪಿ: ಉಡುಪಿ ನಗರ ಭಾಗದಲ್ಲಿ ಸಾರ್ವಜನಿಕರ ಸೇವೆಗೆ ಹೆಚ್ಚುವರಿ ನರ್ಮ್ ಬಸ್ ಅಗತ್ಯವಿದ್ದು, ಕೊರೊನಾ ಸಂದರ್ಭದಲ್ಲಿ ಸೇವೆಯಿಂದ ಸ್ಥಗಿತಗೊಳಿಸಿರುವ 13 ರೂಟುಗಳ ಬಸ್ ಸೇವೆ ಪುನರಾರಂಭ ಮಾಡುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಬೆಳಗಾವಿ ಅಧಿವೇಶನದಲ್ಲಿ ಮನವಿ ಮಾಡಿದರು.

ಉಡುಪಿಯಲ್ಲಿ ಸುಮಾರು 9-10 ವರ್ಷಗಳ ಹಿಂದೆ ನರ್ಮ್ ಬಸ್ಗಳ ಓಡಾಟಕ್ಕೆ ಚಾಲನೆ ನೀಡಲಾಗಿದ್ದು ಪ್ರಾರಂಭದಲ್ಲಿ 45 ನರ್ಮ್ ಬಸ್ಗಳು 33 ಮಾರ್ಗಗಳಲ್ಲಿ ಕಾರ್ಯಾಚರಿಸುತ್ತಿದ್ದವು. ಕೊರೋನಾ ಸಂದರ್ಭದಲ್ಲಿ ಈ ಬಸ್ಸುಗಳ ಓಡಾಟ ವನ್ನು ಸಾಂಕ್ರಾಮಿಕ ರೋಗ ಪ್ರಸರಣ ತಡೆಯ ಕಾರಣಕ್ಕಾಗಿ ಮಾರ್ಗಸೂಚಿಯಂತೆ ನಿಲ್ಲಿಸಲಾಗಿತ್ತು. ಕೊರೋನಾ ಬಳಿಕ 13 ಬಸ್ಸುಗಳ ಓಡಾಟವನ್ನು ಖಾಯಂ ಆಗಿ ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ 20 ರೂಟ್ ಗಳಲ್ಲಿ 32 ಬಸ್ಸುಗಳು ಓಡಾಟ ನಡೆಸುತ್ತಿವೆ.

45 ಬಸ್ಸುಗಳ ಮಂಜೂರಾತಿಯು 10 ವರ್ಷಗಳ ಹಿಂದಿನ ಸಮೀಕ್ಷೆಯಂತೆ ಮಂಜೂರಾಗಿದ್ದು, ಈಗಿನ ಬೇಡಿಕೆಯಂತೆ ಸಾರ್ವಜನಿಕರ ಅನುಕೂಲಕ್ಕಾಗಿ ಕನಿಷ್ಠ 80 ನರ್ಮ್ ಬಸ್ಸುಗಳಿಗೆ ಹೆಚ್ಚಿಸಬೇಕಾದ ಅಗತ್ಯವಿದೆ. ಉಡುಪಿ ನಗರದಲ್ಲಿ ಕಾರ್ಯಾಚರಿಸುತ್ತಿರುವ 32 ನರ್ಮ್ ಬಸ್ಸುಗಳು ತೀರಾ ಹಳೆಯ ದಾಗಿದ್ದು, ಆಗಾಗ ಮಾರ್ಗ ಮಧ್ಯೆ ಕೆಟ್ಟು ನಿಲ್ಲುತ್ತಿರುವ ಘಟನೆಗಳು ಸಂಭವಿಸುತ್ತಿದೆ. ಬಸ್ಸುಗಳಿಗೆ ಚಾಲಕರು ಮತ್ತು ನಿರ್ವಾಹಕರ ಕೊರತೆಯೂ ಇದೆ. ಉಡುಪಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ, ಕಾರ್ಮಿಕ ವರ್ಗಕ್ಕೆ ಉತ್ತಮ ಸರಕಾರಿ ಬಸ್ ಸೇವೆ ನೀಡುವ ನಿಟ್ಟಿನಲ್ಲಿ ಹೆಚ್ಚುವರಿ ಬಸ್ ಮಂಜೂರು ಮಾಡಿ ಸಹಕರಿಸುವಂತೆ ಸಾರಿಗೆ ಸಚಿವರಿಗೆ ಮನವಿ ಮಾಡಿರುವುದಾಗಿ ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

21 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

23 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

23 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

24 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

24 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago