ಉಡುಪಿ : ನದಿಗೆ ಬಿದ್ದು ಯುವಕ ನಾಪತ್ತೆ – Vishwanews24
ಉಡುಪಿ : ನದಿಗೆ ಬಿದ್ದು ಯುವಕ ನಾಪತ್ತೆ
ಉಡುಪಿ : ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಸುಣ್ಣದ ಹಳ್ಳಿ ಕೆ.ಹೆಚ್ ನಗರ ನಿವಾಸಿ ಶರತ್ (23) ಎಂಬ ಯುವಕನು ಜುಲೈ 23 ರಂದು ಕೊಲ್ಲೂರು ಗ್ರಾಮದ ಅರಶಿನ ಗುಂಡಿ ಜಲಪಾತ ವೀಕ್ಷಣೆಯ ಸಂದರ್ಭ ಆಯತಪ್ಪಿ ಬಂಡೆಯ ಮೇಲಿನಿಂದ ಕಾಲು ಜಾರಿ ಬಿದ್ದು, ಸೌಪರ್ಣಿಕ ನದಿಯ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿರುತ್ತಾರೆ.
5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಕೋಲು ಮುಖ, ಸದೃಢ ಶರೀರ ಹೊಂದಿದ್ದು, ಕನ್ನಡ ಹಾಗೂ ತಮಿಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
