Featured

ಉಡುಪಿ: ನನ್ನದು ಚಂಚಲ ಮನಸ್ಸಿನ ನಿರ್ಧಾರ ಅಲ್ಲ. ನಾನು ಬಹಳ ಆಲೋಚಿಸಿ ನಿರ್ಧಾರ ಮಾಡಿದ್ದೇನೆ :  ಹಾಲಾಡಿ ಶ್ರೀನಿವಾಸ್ ಶೆಟ್ಟಿ – VIshwanews24

ಉಡುಪಿ: ನನ್ನದು ಚಂಚಲ ಮನಸ್ಸಿನ ನಿರ್ಧಾರ ಅಲ್ಲ. ನಾನು ಬಹಳ ಆಲೋಚಿಸಿ ನಿರ್ಧಾರ ಮಾಡಿದ್ದೇನೆ ..

ನನ್ನ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ..

ಚುನಾವಣೆ ಸ್ಪರ್ಧಾ ಕಣದಿಂದ ಹಿಂದಕ್ಕೆ ಬಂದಿರುವೆ ಹೊರತು ಇದು ರಾಜಕೀಯ ನಿವೃತ್ತಿ ಅಲ್ಲ..

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸ್ಪಷ್ಟನೆ..

ಉಡುಪಿ, : ‘ಆರು ತಿಂಗಳ ಹಿಂದೆಯೇ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧಾರ ಮಾಡಿದ್ದೇನೆ. ನೀತಿ ಸಂಹಿತೆ ಜಾರಿಯ ದಿನದವರೆಗೂ ನಾನು ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ. ಅಭಿಮಾನಿಗಳು ಈ ಭಾರಿ ಸ್ಪರ್ಧಿಸಿ ಎಂದು ಒತ್ತಾಯ ಮಾಡುತ್ತಿದ್ದಾರೆ. ಆದರೆ ನಾನು ಬಹಳಷ್ಟು ಆಲೋಚನೆ ಮಾಡಿಯೇ ಈ ನಿರ್ಧಾರಕ್ಕೆ ಬಂದಿದ್ದೇನೆ. ಆದುದರಿಂದ ಈ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.

ಹಾಲಾಡಿಯಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡುತ್ತಾ ಅವರು, “ನಾನು ದುಡುಕಿನ ನಿರ್ಧಾರ ತೆಗೆದುಕೊಂಡಿಲ್ಲ. ನನ್ನ ಮನಸ್ಸು ಚಂಚಲವಾಗಿ ಕೂಡ ಜಾಗೃತ ಮನಸ್ಸಿನಿಂದಲೇ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನನ್ನದು ಚಂಚಲ ಮನಸ್ಸಿನ ನಿರ್ಧಾರ ಅಲ್ಲ. ನಾನು ಬಹಳ ಆಲೋಚಿಸಿ ನಿರ್ಧಾರ ಮಾಡಿದ್ದೇನೆ ಎಂದರು.

ಈ ಚುನಾವಣೆಯ ಸ್ಪರ್ಧಾ ಕಣದಿಂದ ಹಿಂದಕ್ಕೆ ಬಂದಿರುವೆ ಹೊರತು ಇದು ರಾಜಕೀಯ ನಿವೃತ್ತಿ ಅಲ್ಲ. ಬದಲಾವಣೆ ಜಗದ ನಿಯಮ. ಮುಂದೆಯೂ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡುವ ಬಿಜೆಪಿ ಪಕ್ಷದ ಅಭ್ಯರ್ಥಿ ಕುಂದಾಪುರದ ಶಾಸಕಾರಾಗಿ ಆರಿಸಿ ಬರಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮುಂದೆ ನಾವು ಶಾಸಕನಲ್ಲದಿದ್ದರೂ ಜನಗಳ ಜೊತೆ ಹೃದಯಪೂರ್ವಕವಾಗಿ ಇರುತ್ತೇನೆ. ವಿಶ್ರಾಂತಿ ಎಂಬೂದು ನಿಷ್ಕ್ರಿಯತೆ. ನಾನು ವಿಶ್ರಾಂತಿ ತೆಗೆದು ಕೊಳ್ಳುವುದಿಲ್ಲ. ಕೊನೆಯ ಉಸಿರುರುವವರೆಗೂ ನಾನು ಕ್ರಿಯಶೀಲನಾಗಿರುತ್ತೇನೆ ಎಂದು ಅವರು ಹೇಳಿದರು.

ಮುಂದಿನ ಶಾಸಕರು ಕ್ಷೇತ್ರದ ಸಮಸ್ಯೆ ಮತ್ತು ಸಾಮಾಜಿಕ ಅಸಮಾನತೆ ಹೋಗಲಾಡಿಸುವ ಕಾರ್ಯ ಮಾಡಬೇಕು ಎಂಬುದು ನನ್ನ ಆಶಯ. ಕುಂದಾಪುರವನ್ನು ಸಿಂಗಾಪುರ ಮಾಡಿ ಎಂದು ನಾನು ಹೇಳುವುದಿಲ್ಲ. ಸಾಮಾಜಿಕ ನ್ಯಾಯಕ್ಕೆ ಅನುಸಾರವಾಗಿ ಶಾಸಕರು ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.

ಕುಂದಾಪುರದ ಜಾತಿ ಮತ ಧರ್ಮ ಮರೆತು ಸಂಪೂರ್ಣ ಬೆಂಬಲ ಕೊಟ್ಟಿದ್ದಾರೆ. ಎಲ್ಲಾ ಜಾತಿ ಮತ ಧರ್ಮಕ್ಕೆ ನನ್ನ ಅಭಿನಂದನೆಗಳು. ಪಕ್ಷೇತರವಾಗಿ ನಿಂತಾಗಲೂ ಭಾವನೆಗೆ ಸ್ಪಂದಿಸಿ ನನಗೆ ಅಭೂತಪೂರ್ವ ಜಯ ಸಿಕ್ಕಿತು. ನಾಲ್ಕು ಬಾರಿ ಬಿಜೆಪಿ, ಒಮ್ಮೆ ಪಕ್ಷೇತರ ನಿಂತಾಗ ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು ಎಂದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago