Featured

ಉಡುಪಿ: ನನ್ನದು ಚಂಚಲ ಮನಸ್ಸಿನ ನಿರ್ಧಾರ ಅಲ್ಲ. ನಾನು ಬಹಳ ಆಲೋಚಿಸಿ ನಿರ್ಧಾರ ಮಾಡಿದ್ದೇನೆ :  ಹಾಲಾಡಿ ಶ್ರೀನಿವಾಸ್ ಶೆಟ್ಟಿ – VIshwanews24

ಉಡುಪಿ: ನನ್ನದು ಚಂಚಲ ಮನಸ್ಸಿನ ನಿರ್ಧಾರ ಅಲ್ಲ. ನಾನು ಬಹಳ ಆಲೋಚಿಸಿ ನಿರ್ಧಾರ ಮಾಡಿದ್ದೇನೆ ..

ನನ್ನ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ..

ಚುನಾವಣೆ ಸ್ಪರ್ಧಾ ಕಣದಿಂದ ಹಿಂದಕ್ಕೆ ಬಂದಿರುವೆ ಹೊರತು ಇದು ರಾಜಕೀಯ ನಿವೃತ್ತಿ ಅಲ್ಲ..

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸ್ಪಷ್ಟನೆ..

ಉಡುಪಿ, : ‘ಆರು ತಿಂಗಳ ಹಿಂದೆಯೇ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧಾರ ಮಾಡಿದ್ದೇನೆ. ನೀತಿ ಸಂಹಿತೆ ಜಾರಿಯ ದಿನದವರೆಗೂ ನಾನು ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ. ಅಭಿಮಾನಿಗಳು ಈ ಭಾರಿ ಸ್ಪರ್ಧಿಸಿ ಎಂದು ಒತ್ತಾಯ ಮಾಡುತ್ತಿದ್ದಾರೆ. ಆದರೆ ನಾನು ಬಹಳಷ್ಟು ಆಲೋಚನೆ ಮಾಡಿಯೇ ಈ ನಿರ್ಧಾರಕ್ಕೆ ಬಂದಿದ್ದೇನೆ. ಆದುದರಿಂದ ಈ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.

ಹಾಲಾಡಿಯಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡುತ್ತಾ ಅವರು, “ನಾನು ದುಡುಕಿನ ನಿರ್ಧಾರ ತೆಗೆದುಕೊಂಡಿಲ್ಲ. ನನ್ನ ಮನಸ್ಸು ಚಂಚಲವಾಗಿ ಕೂಡ ಜಾಗೃತ ಮನಸ್ಸಿನಿಂದಲೇ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನನ್ನದು ಚಂಚಲ ಮನಸ್ಸಿನ ನಿರ್ಧಾರ ಅಲ್ಲ. ನಾನು ಬಹಳ ಆಲೋಚಿಸಿ ನಿರ್ಧಾರ ಮಾಡಿದ್ದೇನೆ ಎಂದರು.

ಈ ಚುನಾವಣೆಯ ಸ್ಪರ್ಧಾ ಕಣದಿಂದ ಹಿಂದಕ್ಕೆ ಬಂದಿರುವೆ ಹೊರತು ಇದು ರಾಜಕೀಯ ನಿವೃತ್ತಿ ಅಲ್ಲ. ಬದಲಾವಣೆ ಜಗದ ನಿಯಮ. ಮುಂದೆಯೂ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡುವ ಬಿಜೆಪಿ ಪಕ್ಷದ ಅಭ್ಯರ್ಥಿ ಕುಂದಾಪುರದ ಶಾಸಕಾರಾಗಿ ಆರಿಸಿ ಬರಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮುಂದೆ ನಾವು ಶಾಸಕನಲ್ಲದಿದ್ದರೂ ಜನಗಳ ಜೊತೆ ಹೃದಯಪೂರ್ವಕವಾಗಿ ಇರುತ್ತೇನೆ. ವಿಶ್ರಾಂತಿ ಎಂಬೂದು ನಿಷ್ಕ್ರಿಯತೆ. ನಾನು ವಿಶ್ರಾಂತಿ ತೆಗೆದು ಕೊಳ್ಳುವುದಿಲ್ಲ. ಕೊನೆಯ ಉಸಿರುರುವವರೆಗೂ ನಾನು ಕ್ರಿಯಶೀಲನಾಗಿರುತ್ತೇನೆ ಎಂದು ಅವರು ಹೇಳಿದರು.

ಮುಂದಿನ ಶಾಸಕರು ಕ್ಷೇತ್ರದ ಸಮಸ್ಯೆ ಮತ್ತು ಸಾಮಾಜಿಕ ಅಸಮಾನತೆ ಹೋಗಲಾಡಿಸುವ ಕಾರ್ಯ ಮಾಡಬೇಕು ಎಂಬುದು ನನ್ನ ಆಶಯ. ಕುಂದಾಪುರವನ್ನು ಸಿಂಗಾಪುರ ಮಾಡಿ ಎಂದು ನಾನು ಹೇಳುವುದಿಲ್ಲ. ಸಾಮಾಜಿಕ ನ್ಯಾಯಕ್ಕೆ ಅನುಸಾರವಾಗಿ ಶಾಸಕರು ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.

ಕುಂದಾಪುರದ ಜಾತಿ ಮತ ಧರ್ಮ ಮರೆತು ಸಂಪೂರ್ಣ ಬೆಂಬಲ ಕೊಟ್ಟಿದ್ದಾರೆ. ಎಲ್ಲಾ ಜಾತಿ ಮತ ಧರ್ಮಕ್ಕೆ ನನ್ನ ಅಭಿನಂದನೆಗಳು. ಪಕ್ಷೇತರವಾಗಿ ನಿಂತಾಗಲೂ ಭಾವನೆಗೆ ಸ್ಪಂದಿಸಿ ನನಗೆ ಅಭೂತಪೂರ್ವ ಜಯ ಸಿಕ್ಕಿತು. ನಾಲ್ಕು ಬಾರಿ ಬಿಜೆಪಿ, ಒಮ್ಮೆ ಪಕ್ಷೇತರ ನಿಂತಾಗ ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago