Featured

ಉಡುಪಿ: ನನ್ನದೇ ಚುನಾವಣೆ ಎಂಬ ರೀತಿಯಲ್ಲಿ ಯಶ್‌ಪಾಲ್  ಜೊತೆ ಪ್ರಚಾರ ಕಾರ್ಯ ನಡೆಸುತ್ತೇನೆ : ರಘುಪತಿ ಭಟ್ – Vishwanews24

ಉಡುಪಿ: ನನ್ನದೇ ಚುನಾವಣೆ ಎಂಬ ರೀತಿಯಲ್ಲಿ ಯಶ್‌ಪಾಲ್ ಜೊತೆ ಪ್ರಚಾರ ಕಾರ್ಯ ನಡೆಸುತ್ತೇನೆ : ರಘುಪತಿ ಭಟ್

ಉಡುಪಿ: ಯಶಪಾಲ್ ಸುವರ್ಣ ಅವರ ಜೊತೆಯಲ್ಲಿ ನಾನು ಚುನಾವಣೆಯ ದಿನದವರೆಗೂ ನನ್ನದೇ ಚುನಾವಣೆ ಎಂಬ ರೀತಿಯಲ್ಲಿ ಪ್ರಚಾರ ಕಾರ್ಯ ನಡೆಸುತ್ತೇನೆ ಎಂದು ರಘುಪತಿ ಭಟ್ ಹೇಳಿದ್ದಾರೆ.

ಯಶಪಾಲ್ ಸುವರ್ಣ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 60,000 ಮತಗಳ ಅಂತರದಲ್ಲಿ ಯಶಪಾಲ ಸುವರ್ಣ ಗೆಲ್ಲುತ್ತಾರೆ. ಇವತ್ತಿನಿಂದ ಸಂಘಟನಾತ್ಮಕ‌ ಕಾರ್ಯ ಚಟುವಟಿಕೆ ಪ್ರಾರಂಭ. ಪ್ರತಿ ಮಟ್ಟದಲ್ಲಿ ಪ್ರಚಾರ ಕಾರ್ಯ ಕೈಗೊಳ್ಳುತ್ತೇನೆ. ಎಲ್ಲರೂ ಕೂಡ ಒಂದೇ ಮನಸ್ಸಿನಿಂದ ಕೆಲಸ ಮಾಡುತ್ತೇವೆ. ಎಲ್ಲಾ ಗೊಂದಲಗಳನ್ನು ಮರೆತು ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇವೆ ಎಂದರು.

ಇನ್ನು ನಿನ್ನೆ ನಾನು ಭಾವನಾತ್ಮಕವಾಗಿ ಬೇಸರದಿಂದ ಮಾತನಾಡಿದ್ದೆ. ಅಪ್ಪ ಅಮ್ಮ ಬೈದಾಗ ಬೇಸರ ಆಗುತ್ತೆ, ಅಮ್ಮನಿಗೆ ವಾಪಸ್ ಬೈತೇವೆ. ಬಳಿಕ ಅವರ ಜೊತೆಯಾಗಿ ಮಲಗುತ್ತೇನೆ. ನನ್ನ ಅಭಿಮಾನಿಗಳು ಬಿಜೆಪಿ ಅಭಿಮಾನಿಗಳಲ್ಲಿ ವಿನಂತಿ ಏನೆಂದರೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಬೇಡ ನಿಲ್ಲಿಸೋಣ. ಇನ್ನು ಮುಂದೆ ಸುವರ್ಣರನ್ನು ಗೆಲ್ಲಿಸುವ ವಾಟ್ಸಪ್ ಮೆಸೇಜ್ ಮಾಡೋಣ.ನೂರಕ್ಕೆ ನೂರು ಉಡುಪಿ ವಿಧಾನಸಭಾ ಕ್ಷೇತ್ರ ಗೆಲ್ಲುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ನನಗೆ ಕರೆ ಮಾಡಿದ್ದರು. ಸಿಎಂ ಮಾತನಾಡಿ ಸರಿಪಡಿಸುವ ವಿಷಯ ಏನು ಇಲ್ಲ. ಯಾವುದೇ ಟ್ರಬಲ್ ಇಲ್ಲ ಟ್ರಬಲ್ ಶೂಟರ್ ಕೂಡ ಇಲ್ಲ. ಪಕ್ಷ ಕೊಟ್ಟ ಅಭ್ಯರ್ಥಿಯ ಜೊತೆ ಕೆಲಸ ಮಾಡುವ ಎರಡನೇ ಅವಕಾಶ ಸಿಕ್ಕಿದೆ. ನಾನು ಅಭ್ಯರ್ಥಿಯಾದರೆ ಎಷ್ಟು ಸ್ಪೀಡ್ ನಲ್ಲಿ ಕೆಲಸ ಮಾಡುತ್ತೇನೋ ಅದೇ ರೀತಿ ಕೆಲಸ ಮಾಡುತ್ತೇನೆ. ಪಕ್ಷ ನಮಗೆ ಒಳ್ಳೆಯ ಅಭ್ಯರ್ಥಿ ಕೊಟ್ಟಿದ್ದಾರೆ. ಪಕ್ಷ ನನಗೆ ಮೂರು ಬಾರಿ ಶಾಸಕನಾಗುವ ಅವಕಾಶ ಕೊಟ್ಟಿದೆ. ಸಾಮಾನ್ಯ ಕುಟುಂಬದಿಂದ ಬಂದವ ಮೂರು ಬಾರಿ ಶಾಸಕನಾಗಿದ್ದು ದೊಡ್ಡ ವಿಷಯ. ಇನ್ನು ಮುಂದೆ ನಾನು ಅಸಮಾಧಾನದ ಮಾತನಾಡುವುದು ಸರಿಯಲ್ಲ ಎಂದರು.

ಯಡಿಯೂರಪ್ಪ ಅವರು ಕರೆಮಾಡುವ ಮುಂಚೆ ನಾನು ಕೆಲಸ ಆರಂಭಿಸಿದ್ದೆ. ನೀನು ಒಳ್ಳೆ ಕಾರ್ಯಕರ್ತ, ನಿನಗೆ ಒಳ್ಳೆ ಭವಿಷ್ಯ ಇದೆ ಎಂದು ಭರವಸೆ ನೀಡಿದ್ದಾರೆ. ಬಿ ಎಲ್ ಸಂತೋಷ್ ಟ್ವೀಟ್ ಮೂಲಕ ನನ್ನ ನಡೆಯನ್ನು ಪ್ರಶಂಶಿಸಿದ್ದಾರೆ. ಇದು ನನಗೆ ತುಂಬಾ ಹೆಮ್ಮೆಯ ವಿಷಯ ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago