Featured

ಉಡುಪಿ: ನನ್ನ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ದಾಖಲೆ ತೋರಿಸಿ , ವಿನಾಕಾರಣ ಆರೋಪಿಸಬೇಡಿ : ಕೋಟ ಶ್ರೀನಿವಾಸ ಪೂಜಾರಿ – Vishwanews24

ಉಡುಪಿ: ನನ್ನ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ದಾಖಲೆ ತೋರಿಸಿ , ವಿನಾಕಾರಣ

ಆರೋಪಿಸಬೇಡಿ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ನನ್ನ ಇಲಾಖೆಯಲ್ಲಿ ಶೇ. 40, 50 ಭ್ರಷ್ಟಾಚಾರ ನಡೆದಿದ್ದರೆ ದಾಖಲೆ ತೋರಿಸಿ. ವಿನಾಕಾರಣ ಶೇ. 100, 50 ಎಂದು ಆರೋಪಿಸಬೇಡಿ. ಯಾರಿಗೆ ಕೊಟ್ಟಿದ್ದೀರಿ ಬಹಿರಂಗಪಡಿಸಿ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

ಗುತ್ತಿಗೆದಾರ ಸಂಘದ ಕೆಂಪಣ್ಣ ಅವರಿಂದ ಕಮಿಷನ್ ಆರೋಪಕ್ಕೆ ಗುರುವಾರ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಅವರು, ವ್ಯವಸ್ಥೆಯನ್ನು ಸರಿಪಡಿಸುವುದಕ್ಕೆ ಬದಲಾಗಿ ಗೊಂದಲ ಮೂಡಿಸುತ್ತದೆ. ಕೆಂಪಣ್ಣ ಸೇರಿದಂತೆ ಉಳಿದವರೆಲ್ಲರೂ ಈ ಬಗ್ಗೆ ಆಲೋಚಿಸಲಿ. ಸರಕಾರವನ್ನು ಟೀಕಿಸುವ ವಿರೋಧ ಪಕ್ಷದ ನಾಯಕರಿಗೆ ನೀವು ದೂರು ಕೊಡುತ್ತೀರಿ. ನಿಮಗೆ ನ್ಯಾಯ ಸಿಗೋದು ಎಲ್ಲಿ? ವಿರೋಧ ಪಕ್ಷ ನಾಯಕರ ಮನೆಯಂಗಳದಲ್ಲಾ? ಎಂದು ಪ್ರಶ್ನಿಸಿದರು.

ಗುತ್ತಿಗೆದಾರರ ಸಂಘದವರು ಸರಕಾರವನ್ನು ಟೀಕೆ ಮಾಡಿದ್ದಾರೆ. ನಮ್ಮ ಇಲಾಖೆಯ ವಸತಿ ಶಿಕ್ಷಣ ಶಾಲಾ ಕಟ್ಟಡದ ಹಣ ಪಾವತಿ ಬಾಕಿ ಇದೆ ಎಂದು ಹೇಳಿದ್ದಾರೆ. ಸುಮಾರು 1100 ಕೋಟಿ ರೂ. ನೀಡಲು ಬಾಕಿ ಇರುವುದು ನಿಜ. ಕೋವಿಡ್-19 ನಿಂದ ಉಂಟಾಗಿರುವ ಎರಡು ವರ್ಷಗಳ ಆರ್ಥಿಕ ಕೊರತೆಯಿಂದ ಬಾಕಿ ಇರಿಸಲಾಗಿದೆ. ಪ್ರಸ್ತಕ ಆರ್ಥಿಕ ವರ್ಷದಲ್ಲಿ 700 ಕೋಟಿ ರೂ. ನೀಡಲಾಗಿದೆ. ಈಗಾಗಲೇ 110 ಕೋಟಿಗಳ ಎರಡು ಕಂತುಗಳ ಹಣ ಬಿಡುಗಡೆಯಾಗಿದೆ. ಜೇಷ್ಠತೆಯ ಆಧಾರದಲ್ಲಿ ಹಣ ಬಿಡುಗಡೆ ಮಾಡಿದ್ದೇವೆ. ಈ ಕುರಿತು ವೆಬ್‌ಸೈಟ್‌ನಲ್ಲಿ ಅನೌನ್ಸ್ ಮಾಡಿದ್ದೇವೆ ಎಂದರು.

ಲಂಡನ್‌ ನಲ್ಲಿ ಪತ್ನಿ ಜೊತೆ ಗೋ ಪೂಜೆ ಮಾಡಿದ ರಿಷಿ ಸುನಾಕ್‌; ಭಾರತೀಯರಿಂದ ಪ್ರಶಂಸೆ – Vishwanews24

ಮೊದಲು ಕೊಟ್ಟವರು, ಕೊನೆಗೆ ಕೊಟ್ಟವರು, ಆಮಿಷ ಒಡ್ಡಿದವರು ಯಾವುದನ್ನು ಕೂಡ ಪರಿಗಣಿಸಿಲ್ಲ. ಯಾರಿಗೆ ಹಣ ಬಿಡುಗಡೆ ಮಾಡಿದ್ದೇವೆ ಎನ್ನುವುದು ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ. ಜೇಷ್ಠತೆಯ ಪಟ್ಟಿ ತಪ್ಪಿ ಹೋಗಿದ್ದರೆ ಹೇಳಿ. ಈಗಾಗಲೇ ಎರಡು ಕಂತು ಬಿಡುಗಡೆಯಾಗಿದೆ. ಇನ್ನೆರಡು ಕಂತು ಬಿಡುಗಡೆ ಮಾಡುತ್ತೇವೆ. ಬಾಕಿ ಹಣವನ್ನು ಮರು ಹೊಂದಾಣಿಕೆ ಮಾಡಲು ಸಾಧ್ಯವೇ ಎಂದು ಪರಿಶೀಲಿಸುತ್ತಿದ್ದೇವೆ ಎಂದರು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಇಲಾಖೆಯಲ್ಲಿ ಭ್ರಷ್ಟಾಚಾರ ಆಗಿದ್ದರೆ ಬಹಿರಂಗವಾಗಿ ಹೇಳಿ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಆರೋಪ ಮಾಡುವ, ತನಿಖೆಗೆ ಆಗ್ರಹಿಸುವ ಅಧಿಕಾರವಿದೆ. ಒಂದು ಸರಕಾರದ ಮೇಲೆ ಆರೋಪ ಮಾಡುವಾಗ, ವಿರೋಧ ಪಕ್ಷಕ್ಕೆ ಹೋಗಿ ದೂರು ಕೊಡುವುದು ಎಷ್ಟು ಸರಿ? ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ ಹಾಕಬಹುದು. ಲೋಕಾಯುಕ್ತಕ್ಕೆ ದೂರು ಕೊಟ್ಟು ತನಿಖೆಗೆ ಒತ್ತಾಯಿಸಿ. ನಿರ್ದಿಷ್ಟ ವಿಚಾರಗಳಿದ್ದರೆ ದಾಖಲೆ ಸಹಿತ ಆರೋಪಿಸಿ. ಅನಗತ್ಯ ಸರಕಾರದ ಮೇಲೆ ಈ ರೀತಿ ಗೂಬೆಕೂರಿಸುವುದು ಸರಿಯಲ್ಲ. ಕೇವಲ ಪ್ರಚಾರಕ್ಕಾಗಿ ಮಾಡುತ್ತಿದ್ದಾರೆ ಅನಿಸುತ್ತಿದೆ ಎಂದರು.

ರಾಜ್ಯದಲ್ಲಿ 2023ಕ್ಕೆ ಬಿಜೆಪಿ ಮತ್ತೆ ಅಧಿಕಾರಕ್ಕೇರುವುದು ನಿಶ್ಚಿತ : ಸಿಎಂ ಬೊಮ್ಮಾಯಿ – Vishwanews24

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago