Featured

ಉಡುಪಿ: ನನ್ನ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ದಾಖಲೆ ತೋರಿಸಿ , ವಿನಾಕಾರಣ ಆರೋಪಿಸಬೇಡಿ : ಕೋಟ ಶ್ರೀನಿವಾಸ ಪೂಜಾರಿ – Vishwanews24

ಉಡುಪಿ: ನನ್ನ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ದಾಖಲೆ ತೋರಿಸಿ , ವಿನಾಕಾರಣ

ಆರೋಪಿಸಬೇಡಿ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ನನ್ನ ಇಲಾಖೆಯಲ್ಲಿ ಶೇ. 40, 50 ಭ್ರಷ್ಟಾಚಾರ ನಡೆದಿದ್ದರೆ ದಾಖಲೆ ತೋರಿಸಿ. ವಿನಾಕಾರಣ ಶೇ. 100, 50 ಎಂದು ಆರೋಪಿಸಬೇಡಿ. ಯಾರಿಗೆ ಕೊಟ್ಟಿದ್ದೀರಿ ಬಹಿರಂಗಪಡಿಸಿ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

ಗುತ್ತಿಗೆದಾರ ಸಂಘದ ಕೆಂಪಣ್ಣ ಅವರಿಂದ ಕಮಿಷನ್ ಆರೋಪಕ್ಕೆ ಗುರುವಾರ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಅವರು, ವ್ಯವಸ್ಥೆಯನ್ನು ಸರಿಪಡಿಸುವುದಕ್ಕೆ ಬದಲಾಗಿ ಗೊಂದಲ ಮೂಡಿಸುತ್ತದೆ. ಕೆಂಪಣ್ಣ ಸೇರಿದಂತೆ ಉಳಿದವರೆಲ್ಲರೂ ಈ ಬಗ್ಗೆ ಆಲೋಚಿಸಲಿ. ಸರಕಾರವನ್ನು ಟೀಕಿಸುವ ವಿರೋಧ ಪಕ್ಷದ ನಾಯಕರಿಗೆ ನೀವು ದೂರು ಕೊಡುತ್ತೀರಿ. ನಿಮಗೆ ನ್ಯಾಯ ಸಿಗೋದು ಎಲ್ಲಿ? ವಿರೋಧ ಪಕ್ಷ ನಾಯಕರ ಮನೆಯಂಗಳದಲ್ಲಾ? ಎಂದು ಪ್ರಶ್ನಿಸಿದರು.

ಗುತ್ತಿಗೆದಾರರ ಸಂಘದವರು ಸರಕಾರವನ್ನು ಟೀಕೆ ಮಾಡಿದ್ದಾರೆ. ನಮ್ಮ ಇಲಾಖೆಯ ವಸತಿ ಶಿಕ್ಷಣ ಶಾಲಾ ಕಟ್ಟಡದ ಹಣ ಪಾವತಿ ಬಾಕಿ ಇದೆ ಎಂದು ಹೇಳಿದ್ದಾರೆ. ಸುಮಾರು 1100 ಕೋಟಿ ರೂ. ನೀಡಲು ಬಾಕಿ ಇರುವುದು ನಿಜ. ಕೋವಿಡ್-19 ನಿಂದ ಉಂಟಾಗಿರುವ ಎರಡು ವರ್ಷಗಳ ಆರ್ಥಿಕ ಕೊರತೆಯಿಂದ ಬಾಕಿ ಇರಿಸಲಾಗಿದೆ. ಪ್ರಸ್ತಕ ಆರ್ಥಿಕ ವರ್ಷದಲ್ಲಿ 700 ಕೋಟಿ ರೂ. ನೀಡಲಾಗಿದೆ. ಈಗಾಗಲೇ 110 ಕೋಟಿಗಳ ಎರಡು ಕಂತುಗಳ ಹಣ ಬಿಡುಗಡೆಯಾಗಿದೆ. ಜೇಷ್ಠತೆಯ ಆಧಾರದಲ್ಲಿ ಹಣ ಬಿಡುಗಡೆ ಮಾಡಿದ್ದೇವೆ. ಈ ಕುರಿತು ವೆಬ್‌ಸೈಟ್‌ನಲ್ಲಿ ಅನೌನ್ಸ್ ಮಾಡಿದ್ದೇವೆ ಎಂದರು.

ಲಂಡನ್‌ ನಲ್ಲಿ ಪತ್ನಿ ಜೊತೆ ಗೋ ಪೂಜೆ ಮಾಡಿದ ರಿಷಿ ಸುನಾಕ್‌; ಭಾರತೀಯರಿಂದ ಪ್ರಶಂಸೆ – Vishwanews24

ಮೊದಲು ಕೊಟ್ಟವರು, ಕೊನೆಗೆ ಕೊಟ್ಟವರು, ಆಮಿಷ ಒಡ್ಡಿದವರು ಯಾವುದನ್ನು ಕೂಡ ಪರಿಗಣಿಸಿಲ್ಲ. ಯಾರಿಗೆ ಹಣ ಬಿಡುಗಡೆ ಮಾಡಿದ್ದೇವೆ ಎನ್ನುವುದು ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ. ಜೇಷ್ಠತೆಯ ಪಟ್ಟಿ ತಪ್ಪಿ ಹೋಗಿದ್ದರೆ ಹೇಳಿ. ಈಗಾಗಲೇ ಎರಡು ಕಂತು ಬಿಡುಗಡೆಯಾಗಿದೆ. ಇನ್ನೆರಡು ಕಂತು ಬಿಡುಗಡೆ ಮಾಡುತ್ತೇವೆ. ಬಾಕಿ ಹಣವನ್ನು ಮರು ಹೊಂದಾಣಿಕೆ ಮಾಡಲು ಸಾಧ್ಯವೇ ಎಂದು ಪರಿಶೀಲಿಸುತ್ತಿದ್ದೇವೆ ಎಂದರು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಇಲಾಖೆಯಲ್ಲಿ ಭ್ರಷ್ಟಾಚಾರ ಆಗಿದ್ದರೆ ಬಹಿರಂಗವಾಗಿ ಹೇಳಿ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಆರೋಪ ಮಾಡುವ, ತನಿಖೆಗೆ ಆಗ್ರಹಿಸುವ ಅಧಿಕಾರವಿದೆ. ಒಂದು ಸರಕಾರದ ಮೇಲೆ ಆರೋಪ ಮಾಡುವಾಗ, ವಿರೋಧ ಪಕ್ಷಕ್ಕೆ ಹೋಗಿ ದೂರು ಕೊಡುವುದು ಎಷ್ಟು ಸರಿ? ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ ಹಾಕಬಹುದು. ಲೋಕಾಯುಕ್ತಕ್ಕೆ ದೂರು ಕೊಟ್ಟು ತನಿಖೆಗೆ ಒತ್ತಾಯಿಸಿ. ನಿರ್ದಿಷ್ಟ ವಿಚಾರಗಳಿದ್ದರೆ ದಾಖಲೆ ಸಹಿತ ಆರೋಪಿಸಿ. ಅನಗತ್ಯ ಸರಕಾರದ ಮೇಲೆ ಈ ರೀತಿ ಗೂಬೆಕೂರಿಸುವುದು ಸರಿಯಲ್ಲ. ಕೇವಲ ಪ್ರಚಾರಕ್ಕಾಗಿ ಮಾಡುತ್ತಿದ್ದಾರೆ ಅನಿಸುತ್ತಿದೆ ಎಂದರು.

ರಾಜ್ಯದಲ್ಲಿ 2023ಕ್ಕೆ ಬಿಜೆಪಿ ಮತ್ತೆ ಅಧಿಕಾರಕ್ಕೇರುವುದು ನಿಶ್ಚಿತ : ಸಿಎಂ ಬೊಮ್ಮಾಯಿ – Vishwanews24

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago