ಉಡುಪಿ : ನನ್ನ ಕುಟುಂಬವನ್ನು ಸರ್ವನಾಶ ಮಾಡಿದ ಕ್ರೂರಿಗೆ ಈ ಭೂಮಿ ಮೇಲೆ ಬದುಕುವ ಯಾವುದೇ ಅರ್ಹತೆ ಇಲ್ಲ : ನೂರ್ ಮುಹಮ್ಮದ್ – vishwanews24
ಉಡುಪಿ : ನನ್ನ ಕುಟುಂಬವನ್ನು ಸರ್ವನಾಶ ಮಾಡಿದ ಕ್ರೂರಿಗೆ ಈ ಭೂಮಿ ಮೇಲೆ ಬದುಕುವ ಯಾವುದೇ ಅರ್ಹತೆ ಇಲ್ಲ : ನೂರ್ ಮುಹಮ್ಮದ್
ಉಡುಪಿ: ‘‘ನನ್ನ ಕುಟುಂಬವನ್ನು ಸರ್ವನಾಶ ಮಾಡಿದ ಕ್ರೂರಿಗೆ ಈ ಭೂಮಿ ಮೇಲೆ ಬದುಕುವ ಯಾವುದೇ ಅರ್ಹತೆ ಇಲ್ಲ. ಆತ ಮನುಷ್ಯನೇ ಅಲ್ಲ, ಮೃಗ. ನನ್ನ ಮಗಳಿಗೆ ಮಾಡಿದ ರೀತಿ ಮುಂದೆ ಆತ ಬೇರೆ ಯಾವ ಹೆಣ್ಣು ಮಕ್ಕಳಿಗೂ ಮಾಡಬಾರದು. ಆದುದರಿಂದ ತ್ವರಿತ ನ್ಯಾಯಾಲಯ ಸ್ಥಾಪಿಸಿ ಕೂಡಲೇ ಆತನಿಗೆ ಗರಿಷ್ಠ ಪ್ರಮಾಣದ ಶಿಕ್ಷೆ ವಿಧಿಸಬೇಕು’’ ಎಂದು ನೂರ್ ಮುಹಮ್ಮದ್ ಒತ್ತಾಯಿಸಿದ್ದಾರೆ.
ಕೊಲೆ ಪ್ರಕರಣದಲ್ಲಿ ಉಡುಪಿ ಜಿಲ್ಲಾ ಪೊಲೀಸರು ಒಳ್ಳೆಯ ರೀತಿಯಲ್ಲಿ ತನಿಖೆ ನಡೆಸಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಅವರ ಕಾರ್ಯದಲ್ಲಿ ನನಗೆ ತುಂಬಾ ತೃಪ್ತಿ ಇದೆ. ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.
ಕಟಪಾಡಿ: ರೈಲು ಹಳಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆ – vishwanews24
‘ನನ್ನ ಮಗಳು ಐನಾಝ್ ಕಳೆದ ಒಂದು ವರ್ಷ ಎರಡು ತಿಂಗಳಿನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ನಲ್ಲಿ ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಳು. ಹಲವು ಬಾರಿ ಹೊರ ದೇಶಕ್ಕೆ ಹೋಗಿ ಬಂದಿದ್ದಾಳೆ. ಅವಳ ಜೊತೆ ಹಿರಿಯ ಸಿಬ್ಬಂದಿ ಕೂಡ ಇರುತ್ತಾರೆ. ಹಾಗೆ ಆಕೆ ಸೀನಿಯರ್ ಕ್ರ್ಯೂ ಆಗಿದ್ದ ಪ್ರವೀಣ್ ಜೊತೆ ಎರಡು ಮೂರು ಬಾರಿ ಪ್ರಯಾಣ ಮಾಡಿದ್ದಾಳೆ. ಅದು ಬಿಟ್ಟು ಅವರಿಗೆ ಬೇರೆ ಯಾವುದೇ ಸಂಪರ್ಕ ಇರಲಿಲ್ಲ’ ಎಂದು ಅವರು ತಿಳಿಸಿದರು.
ಮಂಗಳೂರು: ಹೃದಯಾಘಾತ – ಖ್ಯಾತ ಯುರೋಲಾಜಿಸ್ಟ್ ಡಾ.ಲಕ್ಷ್ಮಣ ಪ್ರಭು ನಿಧನ – vishwanews24
