ಉಡುಪಿ: ‘‘ನನ್ನ ಕುಟುಂಬವನ್ನು ಸರ್ವನಾಶ ಮಾಡಿದ ಕ್ರೂರಿಗೆ ಈ ಭೂಮಿ ಮೇಲೆ ಬದುಕುವ ಯಾವುದೇ ಅರ್ಹತೆ ಇಲ್ಲ. ಆತ ಮನುಷ್ಯನೇ ಅಲ್ಲ, ಮೃಗ. ನನ್ನ ಮಗಳಿಗೆ ಮಾಡಿದ ರೀತಿ ಮುಂದೆ ಆತ ಬೇರೆ ಯಾವ ಹೆಣ್ಣು ಮಕ್ಕಳಿಗೂ ಮಾಡಬಾರದು. ಆದುದರಿಂದ ತ್ವರಿತ ನ್ಯಾಯಾಲಯ ಸ್ಥಾಪಿಸಿ ಕೂಡಲೇ ಆತನಿಗೆ ಗರಿಷ್ಠ ಪ್ರಮಾಣದ ಶಿಕ್ಷೆ ವಿಧಿಸಬೇಕು’’ ಎಂದು ನೂರ್ ಮುಹಮ್ಮದ್ ಒತ್ತಾಯಿಸಿದ್ದಾರೆ.
ಕೊಲೆ ಪ್ರಕರಣದಲ್ಲಿ ಉಡುಪಿ ಜಿಲ್ಲಾ ಪೊಲೀಸರು ಒಳ್ಳೆಯ ರೀತಿಯಲ್ಲಿ ತನಿಖೆ ನಡೆಸಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಅವರ ಕಾರ್ಯದಲ್ಲಿ ನನಗೆ ತುಂಬಾ ತೃಪ್ತಿ ಇದೆ. ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.
‘ನನ್ನ ಮಗಳು ಐನಾಝ್ ಕಳೆದ ಒಂದು ವರ್ಷ ಎರಡು ತಿಂಗಳಿನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ನಲ್ಲಿ ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಳು. ಹಲವು ಬಾರಿ ಹೊರ ದೇಶಕ್ಕೆ ಹೋಗಿ ಬಂದಿದ್ದಾಳೆ. ಅವಳ ಜೊತೆ ಹಿರಿಯ ಸಿಬ್ಬಂದಿ ಕೂಡ ಇರುತ್ತಾರೆ. ಹಾಗೆ ಆಕೆ ಸೀನಿಯರ್ ಕ್ರ್ಯೂ ಆಗಿದ್ದ ಪ್ರವೀಣ್ ಜೊತೆ ಎರಡು ಮೂರು ಬಾರಿ ಪ್ರಯಾಣ ಮಾಡಿದ್ದಾಳೆ. ಅದು ಬಿಟ್ಟು ಅವರಿಗೆ ಬೇರೆ ಯಾವುದೇ ಸಂಪರ್ಕ ಇರಲಿಲ್ಲ’ ಎಂದು ಅವರು ತಿಳಿಸಿದರು.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…